Webdunia - Bharat's app for daily news and videos

Install App

ಮೇಕೆದಾಟು ವಿಷಯದಲ್ಲಿ ತಮಿಳಿಗರು ಕ್ಯಾತೆ ಬಿಡಬೇಕು: ಸಿದ್ದರಾಮಯ್ಯ

Webdunia
ಸೋಮವಾರ, 30 ಮಾರ್ಚ್ 2015 (15:29 IST)
ಯೋಜನೆಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ತಮಿಳುನಾಡಿನ ಜನ ಪದೇ ಪದೇ ಕ್ಯಾತೆ ತೆಗೆಯುವುದು ಸರಿಯಲ್ಲ ಎನ್ನುವ ಮೂಲಕ ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣವಾಗಲಿದೆ ಎಂಬುದನ್ನು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಖಚಿತಪಡಿಸಿದ್ದಾರೆ. 
 
ವಿಧಾನಸಭಾ ಕಲಾಪದಲ್ಲಿ ಮಾತನಾಡಿದ ಅವರು, ತಮಿಳುನಾಡಿನ ಜನರು ಮತ್ತೆ ಮತ್ತೆ ಕ್ಯಾತೆ ತೆಗೆಯುತ್ತಿದ್ದಾರೆ. ಅದನ್ನು ನಿಲ್ಲಿನಸಬೇಕು ಎಂದ ಅವರು, ರಾಜ್ಯ ಸರ್ಕಾರವು ಮೇಕೆದಾಟುವಿನಲ್ಲಿ  ಅಣೆಕಟ್ಟು ನಿರ್ಮಿಸಲು ಸಿದ್ಧವಾಗಿದ್ದು, ಅದು ಖಚಿತ ಕೂಡ. ಈ ಹಿನ್ನೆಲೆಯಲ್ಲಿ ತಮಿಳುನಾಡಿನ ರೈತರ ಪ್ರತಿಭಟನಾ ಕ್ರಮ ಸರಿಯಲ್ಲ ಎಂದರು. 
 
ತಮಿಳುನಾಡಿನ ರೈತ ಸಂಘಟನೆಗಳು ಕಳೆದ ಶನಿವಾರವಷ್ಟೇ ರಾಜ್ಯಾದ್ಯಂತ ಬಂದ್ ಘೋಷಿಸುವ ಮೂಲಕ ಪ್ರತಿಭಟನೆ ಹಮ್ಮಿಕೊಂಡಿದ್ದವು. ಅಲ್ಲದೆ ಕರ್ನಾಟಕ ಸರ್ಕಾರ ಮೇಕೆದಾಟು ಬಳಿ ಅಣೆಕಟ್ಟನ್ನು ನಿರ್ಮಿಸಬಾರದು ಎಂದು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ. 
 
ತಮಿಳುನಾಡು ಹಾಗೂ ಕರ್ನಾಟಕದ ಗಡಿಭಾಗವಾಗಿರುವ ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟನ್ನು ನಿರ್ಮಿಸಿ ಜಲ ವಿದ್ಯುತ್ ಉತ್ಪಾದನೆಗೆ ಸರ್ಕಾರ ಮುಂದಾಗಿದೆ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments