Select Your Language

Notifications

webdunia
webdunia
webdunia
webdunia

ಕೇಂದ್ರದಲ್ಲಿ ತಮಿಳುನಾಡು ಪ್ರಭಾವವಿರುವುದರಿಂದ ರಾಜ್ಯಕ್ಕೆ ಅನ್ಯಾಯ: ದೇವೇಗೌಡ

ಕಾವೇರಿ ವಿವಾದ
ನವದೆಹಲಿ , ಮಂಗಳವಾರ, 20 ಸೆಪ್ಟಂಬರ್ 2016 (13:45 IST)
ಮೊದಲಿಂದಲೂ ಕೇಂದ್ರದ ಮೇಲೆ ತಮಿಳುನಾಡಿನ ಪ್ರಭಾವ ಹೆಚ್ಚು. ಹೀಗಾಗಿ ಕಾವೇರಿ ವಿಷಯದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡರು ಅಸಮಾಧಾನ ವ್ಯಕ್ತಪಡಿಸಿದರು.
 
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲಿನಿಂದಲೂ ಕೇಂದ್ರ ಸರಕಾರ, ಕಾರ್ಯಾಂಗ ಹಾಗೂ ನ್ಯಾಯಾಂಗದ ಮೇಲೆ ತಮಿಳುನಾಡಿನ ಪ್ರಭಾವ ಹೆಚ್ಚಿದೆ. ಹೀಗಾಗಿ ಕಾವೇರಿ ವಿಷಯದಲ್ಲಿ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದರು.
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ಮೇಲುಸ್ತುವಾರಿ ಸಮಿತಿಯ ಮುಂದೆ ನಮ್ಮ ಅಧಿಕಾರಿಗಳು ಸೂಕ್ತವಾದ ವಾದ ಮಂಡಿಸುವಲ್ಲಿ ವಿಫಲರಾಗಿದ್ದಾರೆ. ವಿವಾದವನ್ನು ಇತ್ಯರ್ಥಗೊಳಿಸಲು ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಅನುಭವ ಸಾಲದು. ಕಾವೇರಿ ವಿಷಯಕ್ಕೆ ಸಂಬಂಧಿಸಿದಂತೆ ನಮ್ಮ ಅಧಿಕಾರಿಗಳಿಗೆ ಕರೆ ಮಾಡಿದರೇ ಅವರು ಕರೆಯೇ ಸ್ವೀಕರಿಸದೇ ನುಣುಚಿಕೊಳ್ಳುತ್ತಾರೆ ಎಂದು ಆರೋಪಿಸಿದರು.
 
ಉಭಯ ರಾಜ್ಯಗಳ ನಡುವಿನ ಜಲ ವಿವಾದದಲ್ಲಿ ಪ್ರಧಾನಿ ಮಧ್ಯಸ್ಥಿಕೆ ಕುರಿತು ಬಿಜೆಪಿ ನಾಯಕರು ನೀಡುತ್ತಿರುವ ಹೇಳಿಕೆಗಳು ದುರ್ದೈವದ ಸಂಗತಿ ಎಂದು ಬಿಜೆಪಿ ವಿರುದ್ಧ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡರು ಆಕ್ರೋಶ ವ್ಯಕ್ತಪಡಿಸಿದರು.
 

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ವಿಚಾರದಲ್ಲಿ ಸರಕಾರದ ಬೇಜವಾಬ್ದಾರಿ ವರ್ತನೆ: ಯಡಿಯೂರಪ್ಪ ಕಿಡಿ