Webdunia - Bharat's app for daily news and videos

Install App

ತಮಿಳುನಾಡಿನ 200ಕ್ಕೂ ಅಧಿಕ ಪೊಲೀಸರು ಕೊಡಗಿನ ರೆಸಾರ್ಟ್`ಗೆ ಬಂದಿದ್ದೇಕೆ..?

Webdunia
ಮಂಗಳವಾರ, 12 ಸೆಪ್ಟಂಬರ್ 2017 (17:14 IST)
ವಿ.ಕೆ. ಶಶಿಕಲಾ ಮತ್ತು ಟಿಟಿವಿ ದಿನಕರನ್ ಅವರನ್ನ ಅಣ್ಣಾಡಿಎಂಕೆ ಪಕ್ಷದ ಹುದ್ದೆಯಿಂದ ಉಚ್ಚಾಟಿಸಿದ ಬಳಿಕ ರಾಜಕೀಯ ಹೈಡ್ರಾಮಾ ಶುರುವಾಗಿದೆ. ಟಿಟಿವಿ ದನಕರನ್ ಬೆಂಬಲಿತ ಶಾಸಕರು ವಾಸ್ತವ್ಯ ಹೂಡಿದ ಹಿನ್ನೆಲೆಯಲ್ಲಿ ಕರ್ನಾಟಕದ ರೆಸಾರ್ಟ್`ಗೆ ತಮಿಳುನಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.   

ಹೌದು, ಕೊಡಗಿನ ಸುಂಟಿಕೊಪ್ಪದ ತೋಂಡೂರು ಗ್ರಾಮದ ಬಳಿ ಇರುವ ಪ್ಯಾಡಿಂಗ್ಟನ್ ರೆಸಾರ್ಟ್`ಗೆ ಆಗಮಿಸಿದ್ದ ತಮಿಳುನಾಡಿನ ನೂರಾರು ಪೊಲೀಸರು ಪರಿಶೀಲನೆ ನಡೆಸಿ ತೆರಳಿದ್ದಾರೆ. ಟಿಟಿವಿ ದಿನಕರನ್ ಬೆಂಬಲಿತ 19 ಶಾಸಕರು ಸಿಎಂ ಪಳನಿಸ್ವಾಮಿ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದಾರೆ. ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಒಂದೊಮ್ಮೆ ವಿಶ್ವಾಸಮತ ಸಾಬೀತಿಗೆ ಗವರ್ನರ್ ಸೂಚಿಸಿದರೆ ಪಳನಿಸ್ವಾಮಿ ಸರ್ಕಾರ ಅಲ್ಪಮತಕ್ಕೆ ಕುಸಿದು ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ,

ಹೀಗಾಗಿ, ಟಿಟಿವಿ ದಿನಕರನ್ ಬೆಂಬಲಿತ 19 ಶಾಸಕರು ಪ್ಯಾಂಡಿಂಗ್ಟನ್ ರೆಸಾರ್ಟ್`ನಲ್ಲಿ ವಾಸ್ತವ್ಯ ಹೂಡಿರುವ ಸಂಶಯದ ಹಿನ್ನೆಲೆಯಲ್ಲಿ ಸಿಎಂ ಪಳನಿಸ್ವಾಮಿ ಆದೇಶದ ಹಿನ್ನೆಲೆಯಲ್ಲಿಯೇ ತಮಿಳುನಾಡು ಪೊಲೀಸರು ದಾಳಿ ನಡೆಸಿದ್ದರು ಎಂದು ತಿಳಿದುಬಂದಿದೆ. 14 ಶಾಸಕರು ಇಲ್ಲಿ ವಾಸ್ತವ್ಯ ಹೂಡಿದ್ದು, ಅದರಲ್ಲಿ ಇಬ್ಬರು ಶಾಸಕರು ತಮ್ಮನ್ನ ಬಲವಂತವಾಗಿ ಇಲ್ಲಿಡಲಾಗಿದೆ ಎಂದು ಪೊಲಿಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ. 14 ಶಾಸಕರನ್ನೂ ಭೇಟಿಯಾಗಿ ಪೊಲೀಸರು ಪ್ರತ್ಯೇಕ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಛತ್ತೀಸ್‌ಗಢ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮಹಿಳಾ ಮಾವೋವಾದಿ ಹತ್ಯೆ

ಮದ್ಯದ ಬೆಲೆ ಕೇಳಿಯೇ ನಶೆ ಏರುವಂತಾಗಿದೆ: ಬಿಜೆಪಿ ವ್ಯಂಗ್ಯ

Suhas Shetty Case: ಹತ್ಯೆ ಹಿಂದೆ ಬಜ್ಪೆ ಹೆಡ್‌ ಕಾನ್‌ಸ್ಟೇಬಲ್‌ ಭಾಗಿಯಾಗಿರುವ ಶಂಕೆ

Suhas Shetty Case: ಯುಟಿ ಖಾದರ್ ಸ್ಪೀಕರ್‌ ಆಗಿರುವವರೆಗೆ ಸಾವಿಗೆ ನ್ಯಾಯ ಸಿಗುವ ನಂಬಿಕೆಯಿಲ್ಲ

ಮುಂದಿನ ಸುದ್ದಿ
Show comments