Webdunia - Bharat's app for daily news and videos

Install App

ತಾಂಡಾ: ಬಾಡೂಟ ಸೇವಿಸಿದವರಲ್ಲಿ ವಾಂತಿಭೇಧಿ, ಇದೇ ಕಾರಣವೆಂದ ಅಧಿಕಾರಿಗಳು

Sampriya
ಗುರುವಾರ, 10 ಅಕ್ಟೋಬರ್ 2024 (12:08 IST)
Photo Courtesy X
ಲಿಂಗಸುಗೂರು: ತಾಂಡಾದಲ್ಲಿ ದೇವರ ಹೆಸರಲ್ಲಿ ಸಿದ್ಧಪಡಿಸಿದ ಬಾಡೂಟ ಸೇವನೆ ಮಾಡಿದ ತಾಲ್ಲೂಕಿನ ಗದ್ಲರತಾಂಡಾ ನಿವಾಸಿಗಳಲ್ಲಿ 20ಕ್ಕೂ ಅಧಿಕ ಮಂದಿ ವಾಂತಿ ಭೇಧಿಯಿಂದ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಇನ್ನೂ ವಾಂತಿಭೇದಿಗೆ ಕಲುಷಿತ ಆಹಾರ ಸೇವನೆಯೇ ಕಾರಣ ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ, ಡಾ. ವಿಕ್ರಮ ಪಾಟೀಲ, ಡಾ. ಅಭಿಜಿತ್ ನಾಯಕ ಹಾಗೂ ಸಿಬ್ಬಂದಿ ಗ್ರಾಮಕ್ಕೆ ಭೇಟಿ ಪರಿಶೀಲಿಸಿದರು. ತಾಂಡಾದಲ್ಲಿ ದೇವರ ಹೆಸರಲ್ಲಿ ಬುಧವಾರ ಬಾಡೂಟ ಸಿದ್ಧಪಡಿಸಲಾಗಿತ್ತು. ಇದನ್ನು ಸೇವಿಸಿದ್ದ 20 ಮಂದಿ ವಾಂತಿಭೇಧಿಯಿಂದ ಬಳಲಿದ್ದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅಮರೇಶ ಪಾಟೀಲ ಮಾಕಾಪುರ ಮಾತನಾಡಿ, 'ತಾಂಡಾಕ್ಕೆ ವೈದ್ಕಕೀಯ ತಂಡ ಭೇಟಿ ನೀಡಿ ಪರಿಶೀಲಿಸಿದೆ. ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದೆ. ಕಲಷಿತ ಆಹಾರ ಸೇವನೆಯಿಂದಾಗಿ ವಾಂತಿ ಕಾಣಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಆಹಾರ ಮಾದರಿ ಪಡೆದು ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದೆ’ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments