Select Your Language

Notifications

webdunia
webdunia
webdunia
webdunia

ಯಾದಗಿರಿ ಬಳಿ ಭೀಕರ ಅಪಘಾತ: 11 ಮಂದಿ ಸಾವು 20ಕ್ಕೂ ಹೆಚ್ಚು ಗಂಭೀರ

ಯಾದಗಿರಿ ಬಳಿ  ಭೀಕರ ಅಪಘಾತ: 11 ಮಂದಿ ಸಾವು 20ಕ್ಕೂ ಹೆಚ್ಚು ಗಂಭೀರ
ಯಾದಗಿರಿ , ಸೋಮವಾರ, 20 ಫೆಬ್ರವರಿ 2017 (20:59 IST)
ವೇಗದಿಂದ ಸಾಗುತ್ತಿದ್ದ ಟ್ಯಾಂಕರ್‌ ಎದುರಿನಿಂದ ಬರುತ್ತಿದ್ದ ಟೆಂಪೋಗೆ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ 11 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾದ ಘಟನೆ ರಾಮಸಮುದ್ರದ ಬಳಿ ನಡೆದಿದೆ. 
 
ಹೈದ್ರಾಬಾದ್‌ನಿಂದ ಚಿತಾಪುರ್ ತಾಲೂಕಿನ ವಾಡಿಗೆ ತೆರಳುತ್ತಿದ್ದ ಸಿಮೆಂಟ್ ತುಂಬಿದ ಲಾರಿಯೊಂದು, ಶಹಾಪುರದಲ್ಲಿ ನಿಶ್ಚಿತಾರ್ಥ ಮುಗಿಸಿಕೊಂಡು ಸ್ವಗ್ರಾಮವಾದ ಡಣಾಪುರಕ್ಕೆ ಮರಳುತ್ತಿದ್ದ ಟೆಂಪೋಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 11 ಪ್ರಯಾಣಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
 
ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
 
ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡ ಯಾದಗಿರಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ರೂ.3 ಕೋಟಿ ವೆಚ್ಚದಲ್ಲಿ ದೇಸೀ ತಳಿ ದನಗಳ ವೀರ್ಯ ಸಂಸ್ಕರಣಾ ಕೇಂದ್ರ