Webdunia - Bharat's app for daily news and videos

Install App

ಅರೆನಗ್ನ ಚಿತ್ರಗಳನ್ನು ವೀಕ್ಷಿಸುವುದು ತಪ್ಪೆಂದು ಗೊತ್ತಿದ್ರೂ ಯಾಕೆ ನೋಡಿದ್ದೀರಿ?: ತನ್ವೀರ್‌ಗೆ ಪೂಜಾರಿ ಪ್ರಶ್ನೆ

Webdunia
ಶುಕ್ರವಾರ, 11 ನವೆಂಬರ್ 2016 (13:14 IST)
ಮಹಿಳೆಯನ್ನು ಪೂಜಿಸುವುದು ಭಾರತೀಯ ಸಂಸ್ಕ್ರತಿ. ಅರೆನಗ್ನ ಚಿತ್ರಗಳನ್ನು ವೀಕ್ಷಿಸುವುದು ತಪ್ಪೆಂದು ಗೊತ್ತಿದ್ದರೂ ಮತ್ತೆ ಮತ್ತೆ ಅದನ್ನೇ ನೋಡುವುದು ಸರಿಯೇ? ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಸಚಿವ ತನ್ವೀರ್ ಸೇಠ್ ವಿರುದ್ಧ ಗರಂ ಆಗಿದ್ದಾರೆ.
 
ಅರೆನಗ್ನ ಯುವತಿಯರ ಚಿತ್ರಗಳಿರುವಂತಹ ವಾಟ್ಸಪ್‌ ಗ್ರೂಪ್‌ಗಳಲ್ಲಿ ನೀವಿದ್ದೀರಿ ಎಂದಾಯಿತು.ಇದು ನಿಮ್ಮ ಘನತೆ ಗೌರವಕ್ಕೆ ಧಕ್ಕೆಯಲ್ಲವೇ? ನಿಮ್ಮ ವರ್ತನೆಯಿಂದ ಮೈಸೂರು ಜನತೆಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಅಪಮಾನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಸಚಿವ ಸ್ಥಾನಕ್ಕೆ ಕುತ್ತು ತಂದಿರುವ ನೀವು ಮೈಸೂರಿನ ಜನತೆಯ ಮಾನ ಮರ್ಯಾದೆ ಹಾಳು ಮಾಡಿದ್ದೀರಿ. ಅದ್ದರಿಂದ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಸರಕಾರದಿಂದ ಹೊರಬನ್ನಿ ಎಂದು ಗುಡುಗಿದ್ದಾರೆ.
 
ಕಾಂಗ್ರೆಸ್ ಪಕ್ಷದ ಮತ್ತು ರಾಜ್ಯದ ಜನತೆಯ ಗೌರವವನ್ನು ಕಾಪಾಡಲು ಇಂದು ಸಂಜೆಯೊಳಗೆ ತನ್ವೀರ್ ಸೇಠ್ ಅವರನ್ನು ವಜಾ ಮಾಡಿ. ಇಲ್ಲಾಂದ್ರೆ ಸಚಿವನನ್ನು ವಜಾಗೊಳಿಸಲು ಮುಖ್ಯಮಂತ್ರಿಗಳಿಗೆ ಸೂಚನೆ ನೀಡುವಂತೆ ಹೈಕಮಾಂಡ್‌ಗೆ ಕೋರುತ್ತೇನೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ವಾಗ್ದಾಳಿ ನಡೆಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments