Webdunia - Bharat's app for daily news and videos

Install App

ತಾಂಜಾನಿಯಾ ಯುವತಿಯನ್ನು ಗುಂಪು ವಿವಸ್ತ್ರಗೊಳಿಸಿ ನಗ್ನ ಪೆರೇಡ್ ಮಾಡಿಲ್ಲ: ಪರಮೇಶ್ವರ್ ಸ್ಪಷ್ಟನೆ

Webdunia
ಗುರುವಾರ, 4 ಫೆಬ್ರವರಿ 2016 (16:12 IST)
ಮೇಲ್ನೋಟದ ವರದಿಗಳ ಪ್ರಕಾರ ಟಾಂಜಾನಿಯಾ ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿ ನಗ್ನಳಾಗಿ ಪೆರೇಡ್ ಮಾಡಿಲ್ಲ ಎಂದು ಕರ್ನಾಟಕ ಗೃಹಸಚಿವ ಪರಮೇಶ್ವರ್ ಗುರುವಾರ ಸ್ಪಷ್ಟನೆ ನೀಡಿದ್ದಾರೆ. ಟಾಂಜಾನಿಯಾ ವಿದ್ಯಾರ್ಥಿನಿ ಮೇಲೆ ಜನಾಂಗೀಯ ದಾಳಿಯು ನಡೆದಿಲ್ಲ. ಇದು ಮುಂಚಿನ ಘಟನೆಗೆ ಪ್ರತಿಕ್ರಿಯೆಯಾಗಿ ಉದ್ರಿಕ್ತ ಜನರು ಅವಳನ್ನು ಥಳಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಪೊಲೀಸರು ಬಂಧಿಸಿದ್ದು, ರಾಜ್ಯಸರ್ಕಾರವು ವಿದೇಶಾಂಗ ಸಚಿವಾಲಯಕ್ಕೆ ಘಟನೆ ಬಗ್ಗೆ ವಿವರ ನೀಡಿದೆ. ಬೆಂಗಳೂರಿನಲ್ಲಿ 12,000 ವಿದೇಶಿ ವಿದ್ಯಾರ್ಥಿಗಳಿದ್ದು, ಅವರ ರಕ್ಷಣೆ ನಮ್ಮ ಕರ್ತವ್ಯವಾಗಿದೆ. ಇಂತಹ ಘಟನೆಗಳು ಸಂಭವಿಸಬಾರದು ಎಂದು ಗೃಹಸಚಿವ ಜಿ. ಪರಮೇಶ್ವರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. 
 
ಏತನ್ಮಧ್ಯೆ ಈ ಘಟನೆ ಕುರಿತು ವಿಸ್ತೃತ ವರದಿ ನೀಡುವಂತೆ ಕೇಂದ್ರ ಗೃಹಇಲಾಖೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ. ಈ ಕುರಿತು ಬಿಜೆಪಿ ನಾಯಕ ಮುಕ್ತರ್ ಅಬ್ಬಾಸ್ ನಖ್ವಿ ಈ ಘಟನೆ ಕುರಿತು ಕಾಂಗ್ರೆಸ್ ಮೌನವಾಗಿರುವುದು ಏಕೆ ಎಂದು ಪ್ರಶ್ನಿಸಿದೆ. ಈ ನಡುವೆ ತಾಂಜಾನಿಯಾದ ಭಾರತೀಯ ರಾಯಭಾರಿ ಜಾನ್ ಕಿಜಾಯಿ  ಇದೊಂದು ಜನಾಂಗೀಯ ದಾಳಿ ಎಂದು ಬಣ್ಣಿಸಿದ್ದಾರೆ. ಜನಾಂಗೀಯ ದಾಳಿಯಲ್ಲದಿದ್ದರೆ ಯಾಕೆ ಮತ್ಯಾಕೆ ಬೆದರಿಕೆ ಹಾಕಿದವು. ಯುವತಿ ಕಪ್ಪಗಿದ್ದಳು ಎಂಬ ಕಾರಣಕ್ಕೆ ಹಲ್ಲೆ ಮಾಡಿರುವುದು ಸತ್ಯ ಎಂದು ಜಾನ್ ಕಿಜಾಯಿ ಹೇಳಿದ್ದಾರೆ. 
 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ