Webdunia - Bharat's app for daily news and videos

Install App

ಬಲೂನ್ ಮಾರಾಟಗಾರರ ಸೋಗಿನಲ್ಲಿ ಹಗಲೆಲ್ಲಾ ಬಡಾವಣೆಗಳಲ್ಲಿ ಸುತ್ತಾಡಿ ಬೀಗ ಹಾಕಿರುವ ಮನೆಗಳ ಟಾರ್ಗೆಟ್

Webdunia
ಮಂಗಳವಾರ, 7 ಸೆಪ್ಟಂಬರ್ 2021 (20:04 IST)
ಬಲೂನ್ ಮಾರಾಟಗಾರರ ಸೋಗಿನಲ್ಲಿ ಹಗಲೆಲ್ಲಾ ಬಡಾವಣೆಗಳಲ್ಲಿ ಸುತ್ತಾಡಿ ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ರಾತ್ರಿ ವೇಳೆ ಕನ್ನ ಹಾಕುತ್ತಿದ್ದ ರಾಜಸ್ಥಾನ ಮೂಲದ ಬಗಾರಿಯ ಗ್ಯಾಂಗ್‍ನ ಮೂವರನ್ನು ಅಮೃತಹಳ್ಳಿ ಠಾಣೆ ಪೆÇಲೀಸರು ಬಂಧಿಸಿದ್ದಾರೆ. 
ರಾಜಸ್ತಾನ ಮೂಲದ ಬಗಾರಿಯಾ ಗ್ಯಾಂಗ್‍ನ ಮುಖೇಶ್ (25), ಧರ್ಮ (26), ಲಕ್ಷ್ಮಣ್ (25) ಬಂಧಿತರು. ತಲೆಮರೆಸಿಕೊಂಡಿರುವ ಗ್ಯಾಂಗ್‍ನ ಮೂವರು ಸದಸ್ಯರಿಗೆ ಶೋಧ ನಡೆಸಲಾಗುತ್ತಿದೆ. ಸದ್ಯ ಆರೋಪಿಗಳಿಂದ 200 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದು ಪೆÇಲೀಸರು ತಿಳಿಸಿದರು.  
ಆರೋಪಿಗಳ ತಂಡ ರಾಜಸ್ತಾನದಿಂದ ರೈಲಿನಲ್ಲಿ ಬೆಂಗಳೂರಿಗೆ ಬಂದು ಬಲೂನು ಖರೀದಿಸುತ್ತಿತ್ತು. ಹಗಲಿನಲ್ಲಿ ನಗರದಲ್ಲೆಲ್ಲಾ ಸುತ್ತಾಡಿ ಬಲೂನ್ ಮಾರಾಟ ಮಾಡುತ್ತಿದ್ದರು. ಆ ವೇಳೆ ಬೀಗ ಹಾಕಿರುವ ಐಶಾರಾಮಿ ಮನೆಗಳನ್ನು ಗುರುತಿಸುತ್ತಿದ್ದರು. ಆ ಮನೆಗಳಿಗೆ ಹೋಗಿ ಬೆಲ್ ಮಾಡುತ್ತಿದ್ದರು. ಯಾರೂ ಮನೆಯಿಂದ ಹೊರಗೆ ಬಾರದೇಯಿದ್ದರೆ, ಒಂದೆರಡು ದಿನ ಮನೆಯನ್ನು ಗಮನಿಸುತ್ತಿದ್ದರು. ನಂತರ ಮಧ್ಯ ರಾತ್ರಿ ಮನೆಗೆ ಕನ್ನ ಹಾಕಿ ಲಾಕರ್ ಒಡೆದು ಕೆಲವೇ ನಿಮಿಷಗಳಲ್ಲಿ ಚಿನ್ನಾಭರಣ ದೋಚುತ್ತಿದ್ದರು. ಕದ್ದ ಚಿನ್ನಾಭರಣವನ್ನು ರಾಜಸ್ತಾನದ ಜುವೆಲ್ಲರಿ ಅಂಗಡಿಗೆ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ಒಂದು ವೇಳೆ ಬೆಲ್ ಮಾಡಿದಾಗ ಮನೆಯಿಂದ ಯಾರಾದರೂ ಹೊರ ಬಂದರೆ ಬಲೂನ್ ಖರೀದಿಸುವಂತೆ ಒತ್ತಾಯಿಸಿ ಅಲ್ಲಿಂದ ತೆರಳುತ್ತಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments