ಟಾರ್ಗೆಟ್ ಸುಮಲತಾ ಅಂಬರೀಶ್?

Webdunia
ಮಂಗಳವಾರ, 5 ಮಾರ್ಚ್ 2019 (15:36 IST)
ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವೆ ಎಂದಿರುವ ಸುಮಲತಾ ಅಂಬರೀಶ್ ಗೆ ಭಾವನಾತ್ಮಕವಾಗಿ ಕಟ್ಟಿಹಾಕಲು ಜೆಡಿಎಸ್ ಸಿದ್ಧವಾಗಿದೆ.

ಸುಮಲತಾರನ್ನು ಭಾವನಾತ್ಮಕವಾಗಿ ಕಟ್ಟಿಹಾಕಲು ಜೆಡಿಎಸ್ ಯತ್ನ ನಡೆಸುತ್ತಿದೆ ಎನ್ನಲಾಗಿದೆ. ದಿ.ಅಂಬರೀಶ್ ಪತ್ನಿ ಸುಮಲತಾ ಅವ್ರಿಗೆ ಜೆಡಿಎಸ್ ಬಹಿರಂಗ ಪ್ರಶ್ನೆಗಳನ್ನು ಹಾಕಿದೆ.

ಸಾಮಾಜಿಕ ಜಾಲತಾಣದ ಮುಖಾಂತರ ಪ್ರಶ್ನೆಗಳ ಸುರಿಮಳೆಗೆ ಪರ ವಿರೋಧ ಚರ್ಚೆಗಳು ಶುರುವಾಗಿವೆ.  
ಅಂಬರೀಶ್ ಅಭಿಮಾನಿಗಳು, ಮಂಡ್ಯದ ಅಖಂಡ ಜನತೆ ಹೆಸರಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರಶ್ನೆ ಕೇಳುತ್ತಿದ್ದಾರೆ.  ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದತೆ ನಡೆಸುತ್ತಿರುವ ಸುಮಲತಾ ಅಂಬರೀಶ್ ಗೆ ರಾಜಕೀಯ ಎಂಟ್ರಿ ವಿರೋಧಿಸಿ ಪ್ರಶ್ನೆಗಳನ್ನು ಕೇಳಲಾಗುತ್ತಿದೆ. ಪದೇ ಪದೇ ಅಂಬರೀಶ್ ಹೆಸರು ಬಳಸಿ ಪ್ರಶ್ನೆ ಹಾಕಿರೋ ಜೆಡಿಎಸ್ ಕಾರ್ಯಕರ್ತರು, ಸುಮಲತಾಗೆ ಕೇಳಿರುವ ಪ್ರಶ್ನೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಪ್ರಶ್ನೆ 1. ಅಂಬರೀಶಣ್ಣ ಬದುಕಿದ್ದಾಗ ನನ್ನ ಕುಟುಂಬಸ್ಥರನ್ನು ರಾಜಕೀಯಕ್ಕೆ ಕರೆತರುವುದಿಲ್ಲ‌ ಎಂದಿದ್ದರು.
ಅವರ ಮಾತಿಗೆ ನೀವು ಕಿಂಚಿತ್ತೂ ಬೆಲೆ ಕೊಡುವುದಿಲ್ಲವ ಸುಮಲತಾ ಅಕ್ಕ..?

ಪ್ರಶ್ನೆ 2. ಕಳೆದ ಚುನಾವಣೆಯಲ್ಲಿ ಬಿ-ಫಾರಂ ಮನೆ ಬಾಗಿಲಿಗೆ ಬಂದರೂ ರಾಜಕೀಯದಿಂದ ಬೇಸತ್ತ ಅಂಬರೀಶಣ್ಣ ಚುನಾವಣೆಯಿಂದ ದೂರುಳಿದಿದ್ದರು. ಅಂಬರೀಶ್ ಅವರ ಆ ನಡೆ ಮರೆತುಹೊಯ್ತ ಸುಮಲತಾ ಅಕ್ಕ..?

ಪ್ರಶ್ನೆ 3. ಅಂಬರೀಶ್ ಅವ್ರಿಗೆ ಬೇಡವಾದ ರಾಜಕೀಯ ನಿಮಗೇಕೆ..? ಮಂಡ್ಯ ಜನರ ಋಣ ತೀರಿಸಲು ರಾಜಕೀಯ ಬೇಕ..?

ಮಂಡ್ಯ ಜನರ ಋಣ ತೀರೀಸಲು NGO ಸಂಸ್ಥೆ ತೆರೆದು ಮಂಡ್ಯ ಜನತೆಗೆ ಸಹಾಯ ಮಾಡಲಾಗಲ್ವ ಸುಮಲತಾ ಅಕ್ಕ..?

ಪ್ರಶ್ನೆ 4. ಅಂಬರೀಶ್ ನಿಧನರಾದಾಗ ಮುಖ್ಯಮಂತ್ರಿ ಅನ್ನೋದನ್ನು ಮರೆತು ಕುಮಾರಣ್ಣ ಸಾಮಾನ್ಯ ಅಭಿಮಾನಿಯಂತೆ ಮಂಡ್ಯ ಜನರಿಗೆ ಅಂಬರೀಶ್ ಅಣ್ಣನ‌ ಅಂತಿಮ ದರ್ಶನ ಮಾಡಿಸಿದ್ರು. ಇದನ್ನ ನೀವು ಮರೆತರೂ ಮಂಡ್ಯ ಜನ‌ ಮರೆಯೋದಿಲ್ಲ ಸುಮಲತಾ ಅಕ್ಕ..?

ಪ್ರಶ್ನೆ 5. ಅಂಬರೀಶ್ ಅಣ್ಣನ ಹೆಸರಿನಲ್ಲಿ ಮೈಸೂರಿನಲ್ಲಿ ಫಿಲ್ಮ್ ಸಿಟಿ ಕಟ್ಟಬೇಕು ಎಂದ ಕುಮಾರಣ್ಣನ ಗೆಲ್ಲಿಸಬೇಕೋ..?
ಅಥವಾ ಅಂಬಿ ಅಣ್ಣ ನಮ್ಮನ್ನೆಲ್ಲಾ ಅಗಲಿ ತಿಂಗಳು ಕಳೆಯುವ ಮುನ್ನ ಅಣ್ಣನ ಅಗಲಿಕೆಯನ್ನೇ ಬಂಡವಾಳ ಮಾಡಿಕೊಂಡ ನಿಮ್ಮನ್ನ ಗೆಲ್ಲಿಸಬೇಕೋ..? ನೇರವಾಗಿ ಹೇಳಿ ಸುಮಲತಾ ಅಕ್ಕ..?



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರು ದಸರಾದಲ್ಲಿ ಕಂಬಳ, ಎಷ್ಟು ಕೋಣಗಳು ಭಾಗವಹಿಸಲಿದೆ ಗೊತ್ತಾ

ಬಿಡದಿ ಟೌನ್‌ಶಿಪ್‌, ಸಿಎಂಗಾಗಿ ಭೈರಮಂಗಲದಲ್ಲಿ ನಾಳೆ ಸಂಜೆ 4 ಗಂಟೆವರೆಗೂ ಕಾಯುತ್ತೇನೆ: ಎಚ್‌ ಡಿ ಕುಮಾರಸ್ವಾಮಿ

Video, ವಾಹನ ತಡೆದು ಕಾಡಾನೆ ರಸ್ತೆ ದಾಟಲು ಸಹಾಯ ಮಾಡಿದ ಅರಣ್ಯ ಸಿಬ್ಬಂದಿ

Video, ಬೈಕ್ ಓಡಿಸುತ್ತಿರುವಾಗ ಸವಾರನ ಮೇಲೆ ಬಿದ್ದ ಮರದ ಕೊಂಬೆ, ಮುಂದೇನಾಯ್ತು ನೋಡಿ

ದೇಣಿಗೆ ವಿವಾದ: ರಾಮಮಂದಿರ ಹಣ ಎಣಿಕೆ ಕೊಠಡಿಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments