Webdunia - Bharat's app for daily news and videos

Install App

ಸಂಘಟನೆಯಿಂದ ಸಹಾಯ ಮಾಡುವುದಾಗಿ ಬಂದು ಮೋಸ ಮಾಡುವ ಖಾತರ್ನಾಕ್

Webdunia
ಶನಿವಾರ, 24 ಸೆಪ್ಟಂಬರ್ 2022 (15:51 IST)
ಮಾನವ ಹಕ್ಕುಗಳ ರಕ್ಷಣೆ ಮಾಡುತ್ತೇನೆ ಎಂದು ಅಮಾಯಕರಿಗೆ ಸಹಾಯ ಮಾಡುವ ನೆಪದಲ್ಲಿ ಸುಲಿಗೆ ಮಾಡುತ್ತಿದ್ದ. ಗಂಡ ತುಂಬಾ ಕಿರುಕುಳ ನೀಡುತ್ತಿದ್ದಾನೆ ಎಂದು ಪ್ರತಿಭಾ ಎಂಬಾಕೆ ಬೆಳ್ಳಂದೂರು ಪೊಲೀಸ್ ಠಾಣೆ ಮೆಟ್ಟಿಲೇರಿದ್ರು. ಪೊಲೀಸರು ಗಂಡ-ಹೆಂಡತಿ ಜಗಳ ಎಂದು ಬುದ್ದಿವಾದ ಹೇಳಿ ಕಳುಹಿಸಿದ್ದರು. ಇಷ್ಟಾದ್ರೂ ಸುಮ್ಮನಿರದ ಪ್ರತಿಭಾ ಪತಿ ಜನರ್ಧಾನ ಆಸ್ತಿಗಾಗಿ ಆಕೆಗೆ ಇನ್ನಿಲ್ಲದ ಹಿಂಸೆ ನೀಡಿತ್ತಿದ್ದ. ಆದರೆ ಪೊಲೀಸರು ಮಾತ್ರ ಎಫ್‍ಐಆರ್ ದಾಖಲಿಸಿರಲಿಲ್ಲ. ಇದರಿಂದ ನೊಂದಿದ್ದ ಪ್ರತಿಭಾಗೆ ಸಂಘಟನೆ ಹೆಸರಲ್ಲಿ ಪಕ್ಕದ ಮನೆ ರಾಣಿ ಮೂಲಕ ಪ್ರಕಾಶ್ ಮೂರ್ತಿ ಪರಿಚಯವಾಗಿದ್ದ.
ಪ್ರಕಾಶ್, ನಿನೊಬ್ಬಳೇ ಸ್ಟೇಷನ್‍ಗೆ ಹೋದ್ರೆ ಏನು ಆಗಲ್ಲ.. ನಾಳೆ ನನ್ನೊಂದಿಗೆ ಬಾ ಅಂತಾ ಕರೆದುಕೊಂಡು ಸೀದಾ ಕಮಿಷನರ್ ಕಚೇರಿ ಬಾಗಿಲು ತಟ್ಟಿದ್ದ. ಕಮಿಷನರ್ ಹೇಳಿದ್ದಕ್ಕೋ‌ ಏನೋ ಬೆಳ್ಳಂದೂರು ಪೊಲೀಸರು ಪ್ರತಿಭಾ ಗಂಡನ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ಜನಾರ್ಧನ್ ಬಂಧಿಸಿ ಜೈಲಿಗೆ ಕಳಿಸಿದ್ದರು. ಅಷ್ಟೇ ಅಲ್ಲದೇ ಜನರ್ದಾನ್‍ಗೆ ಅತ್ತೆ ಕೊಡಿಸಿದ್ದ ಕಾರು, ಆಭರಣಗಳನ್ನು ಪ್ರತಿಭಾಗೆ ಪ್ರಕಾಶ್ ವಾಪಸ್ ಕೊಡಿಸಿದ್ದ.
 
ಪ್ರತಿಭಾ ಗಂಡ ಜೈಲಿಗೆ ಹೋಗುತ್ತಿದ್ದಂತೆ ಪ್ರಕಾಶನ ಅಸಲಿ ಮುಖ‌ ಪ್ರದರ್ಶನವಾಗಿತ್ತು. ನಿನ್ನ ಕೇಸ್ ದಾಖಲಿಸಲು ಹಾಗೂ ನಿನ್ನ ಗಂಡನ ವಿರುದ್ಧ ಕ್ರಮ ಕೈಗೊಳ್ಳಲು ಸಹಾಯ ಮಾಡಿದ್ದು ನಾನು. ಹೀಗಾಗಿ ನನಗೆ 5 ಲಕ್ಷ ರೂ. ಹಣ ನೀಡುವಂತೆ ಪ್ರಕಾಶ್ ಒತ್ತಾಯಿಸಿದ್ದ. ಇದಕ್ಕೆ ಪ್ರತಿಯಾಗಿ ಹಾಗೋ‌ಹೀಗೋ ಮಾಡಿ ಪ್ರತಿಭಾ ತಾಯಿ ಸುಮಾರು 1.75 ಲಕ್ಷ ರೂ. ಹಣ ಹೊಂದಿಸಿ ಕೊಟ್ಟಿದ್ರು. ಇಷ್ಟಕ್ಕೆ ಸುಮ್ಮನಾಗದ ಪ್ರಕಾಶ್ ಹಣ ನೀಡದಿದ್ರೆ ನಿನ್ನ ಗಂಡನ ಪರ ನಿಂತು ನಿಮ್ಮ ಮೇಲೆ ಕೇಸ್ ಹಾಕಿಸೋದಾಗಿ ಬೆದರಿಕೆ ಹಾಕಿದ್ದ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments