Select Your Language

Notifications

webdunia
webdunia
webdunia
webdunia

ತೆರಿಗೆ ಸಲಹೆಗಾರರ ದಿನ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯ ಪ್ರವಾಸ

ತೆರಿಗೆ ಸಲಹೆಗಾರರ ದಿನ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯ ಪ್ರವಾಸ
ಹುಬ್ಬಳ್ಳಿ , ಗುರುವಾರ, 3 ಅಕ್ಟೋಬರ್ 2019 (16:53 IST)
ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅ.5, 6 ರಂದು ಹುಬ್ಬಳ್ಳಿಗೆ ಭೇಟಿ ನೀಡಲಿದ್ದಾರೆ.

ಕರ್ನಾಟಕ ರಾಜ್ಯ ತೆರಿಗೆ ಸಲಹೆಗಾರರ ಸಂಘದ ವತಿಯಿಂದ ಪ್ರಪ್ರಥಮ ಬಾರಿಗೆ ತೆರಿಗೆ ಸಲಹೆಗಾರ ದಿನವನ್ನು ಅ.5 ಮತ್ತು 6 ರಂದು ಹುಬ್ಬಳ್ಳಿ ನಗರದ ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ‌. ಈ ಕಾರ್ಯಕ್ರಮಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸಲಿದ್ದಾರೆ. ಹೀಗಂತ ಎಸ್.ನಂಜುಂಡ ಪ್ರಸಾದ ಹೇಳಿದ್ದಾರೆ.

ತೆರಿಗೆ ಸಲಹೆಗಾರರಿಗೆ ಯಾವುದೇ ದಿನ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಅ.5 ರಂದು ಅಧಿಕೃತವಾಗಿ ಸಲಹೆಗಾರರ ದಿನವನ್ನಾಗಿ ಆಚರಿಸಲಾಗುತ್ತಿದೆ. ಅ. 5 ರಂದು ತೆರಿಗೆ ಸಲಹೆಗಾರರ ದಿನವನ್ನು ಆಚರಣೆ ಮಾಡಲಾಗುತ್ತಿದ್ದು, ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಕೇಂದ್ರದ ರಾಜ್ಯ ರೈಲ್ವೆ ಸಚಿವ ಸುರೇಶ ಅಂಗಡಿ, ಸಚಿವ ಜಗದೀಶ್ ಶೆಟ್ಟರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮೋಹನ ಲಿಂಬಿಕಾಯಿ ಭಾಗಿಯಾಗಲಿದ್ದಾರೆ ಎಂದಿದ್ದಾರೆ.

ಅ.6 ರಂದು ತೆರಿಗೆ ಸಲಹೆಗಾರರ ಸಂಸ್ಥಾಪಕರ ದಿನಾಚರಣೆ ಮಾಡಲಿದ್ದು, ಆ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಲಿ ಶಾಸಕ ಹೆಚ್.ಕೆ.ಪಾಟೀಲ್ ಆಗಮಿಸುತ್ತಿದ್ದು, ಅಂದು ತೆರಿಗೆ ಸಲಹೆಗಾರರನ್ನು ಸನ್ಮಾನಿಸಲಾಗುವುದು. ಅಲ್ಲದೇ ಸಂಘದ ಇ - ಪತ್ರಿಕೆ, ಅಂತರ್ಜಾಲ ತಾಣ, ಸಂಘದ ಲಾಂಛನವನ್ನು ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

BSY ಗೆ ಸಂಕಷ್ಟ: ಜಮಖಂಡಿ ಜಿಲ್ಲೆಗೆ ಆಗ್ರಹಿಸಿ ಭಾರಿ ಮೆರವಣಿಗೆ