Webdunia - Bharat's app for daily news and videos

Install App

ಇನ್ನು ವಾಯು ವಿಹಾರ ಮಾಡುವುದಕ್ಕೂ ತೆರಿಗೆ: ಗ್ಯಾರಂಟಿಗಾಗಿ ಎಲ್ಲೆಲ್ಲಾ ವಸೂಲಿ ಮಾಡ್ತಾರಪ್ಪೋ

Krishnaveni K
ಮಂಗಳವಾರ, 25 ಫೆಬ್ರವರಿ 2025 (12:18 IST)
Photo Credit: X
ಬೆಂಗಳೂರು: ಕರ್ನಾಟಕ ಸರ್ಕಾರ ದಿನಕ್ಕೊಂದರ ಮೇಲೆ ಬೆಲೆ ಏರಿಕೆ ಬರೆ ಎಳೆಯುತ್ತಿದೆ. ಇದೀಗ ವಾಯು ವಿಹಾರಿಗಳಿಗೂ ಸುಂಕ ವಿಧಿಸಲು ಮುಂದಾಗಿದೆ. ಇದರ ಬಗ್ಗೆ ಪ್ರತಿಕ್ರಿಯಿಸಿರುವ ನೆಟ್ಟಿಗರು ಗ್ಯಾರಂಟಿಗಾಗಿ ಎಲ್ಲೆಲ್ಲಾ ವಸೂಲಿ ಮಾಡ್ತಾರಪ್ಪೋ ಎಂದು ಕಿಡಿ ಕಾರಿದ್ದಾರೆ.

ರಾಜ್ಯ ಸರ್ಕಾರಕ್ಕೆ ಈಗ ಗ್ಯಾರಂಟಿಗಳಿಗೆ ಹಣ ಹೊಂದಿಸುವುದೇ ದೊಡ್ಡ ಸವಾಲಾಗಿದೆ. ಅದಕ್ಕಾಗಿಯೇ ಈಗ ಸಿಕ್ಕ ಸಿಕ್ಕಲ್ಲಿ ತೆರಿಗೆ, ದರ ಏರಿಕೆ ಬರೆ ಹಾಕಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈಗಾಗಲೇ ಬಸ್ ಪ್ರಯಾಣ ದರ ಏರಿಕೆ ಮಾಡಿದ್ದು, ಸದ್ಯದಲ್ಲೇ ವಿದ್ಯುತ್, ಹಾಲಿನ ದರ ಏರಿಕೆ ಮಾಡಲು ಯೋಜನೆ ರೂಪಿಸಲಾಗಿದೆ.

ಇದೀಗ ಸರ್ಕಾರೀ ಕ್ರೀಡಾಂಗಣದಲ್ಲಿ ತರಬೇತಿ ಪಡೆಯುತ್ತಿರುವ ಕ್ರೀಡಾಳುಗಳು, ವಾಯು ವಿಹಾರಿಗಳಿಗೂ ಸುಂಕ ವಿಧಿಸಲು ಸರ್ಕಾರ ಮುಂದಾಗಿದೆ. ವಾಯುವಿಹಾರಿಗಳಿಗೂ ಶುಲ್ಕ ವಿಧಿಸುವ ಬಗ್ಗೆ ಈಗಾಗಲೇ ಸುತ್ತೋಲೆ ಹೊರಡಿಸಲಾಗಿದೆ. ಮಾರ್ಚ್ 1 ರಿಂದಲೇ ಇದು ಜಾರಿಗೆ ಬರಲಿದೆ.

ತುಮಕೂರು ನಗರದ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ವಾಕಿಂಗ್ ಮಾಡುವ ಕ್ರೀಡಾಪಟುಗಳು, ವಾಯುವಿಹಾರಿಗಳಿಗೆ ಈಗ 300 ರೂ. ಶುಲ್ಕ ವಿಧಿಸಲು ಆದೇಶ ಹೊರಡಿಸಲಾಗಿದೆ. ವಾಯುವಿಹಾರಿಗಳಿಗೆ ಮಾಸಿಕ 300 ರೂ. ಶುಲ್ಕ, ಕ್ರೀಡಾಪಟುಗಳಿಗೆ ವಾರ್ಷಿಕವಾಗಿ 5,000 ರೂ. ಶುಲ್ಕ ವಿಧಿಸಲು ಆದೇಶ ಹೊರಡಿಸಲಾಗಿದೆ.  ಇದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಒಂದೆಡೆ ಪದಕ ಗೆದ್ದು ತನ್ನಿ ಎನ್ನುವ ಸರ್ಕಾರವೇ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಬದಲು ಶುಲ್ಕದ ಬರೆ ವಿಧಿಸಿದರೆ ಅವರು ಅಭ್ಯಾಸ ನಡೆಸಲು ಎಲ್ಲಿಗೆ ಹೋಗಬೇಕು ಎಂದು ಆಕ್ರೋಶ ಕೇಳಿಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments