ಶಾಲೆಗ ರಜೆ ಘೋಷಿಸಿ ಗುಂಡು ತುಂಡಿನ ಪಾರ್ಟಿ ಮಾಡಿದ ಶಿಕ್ಷಕರು!

Webdunia
ಸೋಮವಾರ, 5 ಫೆಬ್ರವರಿ 2018 (12:26 IST)
ವಿಜಯಪುರ: ಶಿಕ್ಷಕರೊಬ್ಬರು ನಿವೃತ್ತಿ ಹೊಂದಿದ ಹಿನ್ನೆಲೆ  ಉಳಿದ ಶಿಕ್ಷಕರೆಲ್ಲಾ ಒಟ್ಟಿಗೆ ಸೇರಿ ಗುಂಡು, ತುಂಡಿನ ಪಾರ್ಟಿ ನಡೆಸಿದ ಘಟನೆಯೊಂದು ನಡೆದಿದೆ.


ಮುದ್ದೇಬಿಹಾಳದ ರಕ್ಕಸಗಿ ಸರ್ಕಾರಿ ಪ್ರೌಢ ಶಾಲೆ ಮಕ್ಕಳಿಗೆ ಅನಧಿಕೃತವಾಗಿ ರಜೆ ಸಾರಿ ಶಿಕ್ಷಕರೆಲ್ಲಾ ಪಕ್ಕದ ಹೊಲದಲ್ಲಿ ಸೇರಿ ಗುಂಡು ತುಂಡು ಪಾರ್ಟಿ ನಡೆಸಿದ್ದಾರೆ. ಈ ಘಟನೆ ಜನವರಿ 31 ರಂದು ನಡೆದಿದ್ದು ಈಗ ಬೆಳಕಿಗೆ ಬಂದಿದೆ.
ಬಿ.ಆರ್‌.ಲಮಾಣಿ ಎನ್ನುವ ಶಿಕ್ಷಕ ನಿವೃತ್ತಿಯಾದ ಸಂಭ್ರಮಕ್ಕೆ ಮುಖ್ಯೋಪಾಧ್ಯಾಯ ಎ.ಎಚ್‌.ಬಿರಾದಾರ್‌ ಮತ್ತು ನಾಲ್ವರು ಸಹ ಶಿಕ್ಷಕರು ಈ ಭರ್ಜರಿ ಪಾರ್ಟಿ ಮಾಡುತ್ತಿದ್ದಾರೆ. 


ಯಾವುದೇ ಉದ್ದೇಶವಿಲ್ಲದೆ ರಜೆ ಸಾರಿದ್ದರ ಬಗ್ಗೆ ಅನುಮಾನಗೊಂಡ ಪೋಷಕರು ಮತ್ತು ಸಾರ್ವಜನಿಕರು ಸ್ಥಳಕ್ಕೆ ತೆರಳಿ ಶಿಕ್ಷಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಕೇಳಿದಾಗ ಬಿರಾದಾರ್ ಅವರು ನಾನು ಸುರಪುರದ ದೊರೆ ನನ್ನನ್ನು ಕೇಳುವವರು ಯಾರು? ಎಂದಿದ್ದಾರೆ. ಮಾತ್ರವಲ್ಲದೆ ಬಿಇಓ ಅವರಿಗೂ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.
ಈ ಬಗ್ಗೆ ನಾಲ್ವರು ಶಿಕ್ಷಕರನ್ನು ಅಮಾನತು ಮಾಡುಲು ಬಿಇಓ ಅವರು ಡಿಡಿಪಿಐಗೆ ಶಿಫಾರಸು ಪತ್ರ ಕಳುಹಿಸಿರುವ ಬಗ್ಗೆ ವರದಿಯಾಗಿದೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾನವಿಯತೆಯೇ ಇಲ್ಲ, ಬೈಕ್ ಸವಾರನಿಗೆ ಕಾರಿನಿಂದ ಢಿಕ್ಕಿ ಹೊಡೆದು ಕೊಂದ ದಂಪತಿ: ವಿಡಿಯೋ

ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments