Webdunia - Bharat's app for daily news and videos

Install App

ದೈಹಿಕ ಶಿಕ್ಷಕನ ಕೊಲೆ ರಹಸ್ಯ ಬಹಿರಂಗ

Webdunia
ಸೋಮವಾರ, 31 ಅಕ್ಟೋಬರ್ 2016 (10:10 IST)
ತಾಲ್ಲೂಕಿನ ಮುರೋಳ ಗ್ರಾಮದಲ್ಲಿ ಕಳೆದ ವಾರ ನಡೆದ ಕೊಲೆ ಪ್ರಕರಣದ ರಹಸ್ಯ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. 
 
ದೈಹಿಕ ಶಿಕ್ಷಕರಾಗಿದ್ದ ಬಾಬುರೆಡ್ಡಿ ನೀಲರೆಡ್ಡಿ ಮೈದೂರ್ ಅವರ ಹತ್ಯೆ ಆರೋಪದ ಮೇಲೆ ಅವರ ಪತ್ನಿ  ಸೇರಿ ಮೂವರು ಆರೋಪಿಗಳನ್ನು ಹಾವೇರಿ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
 
ಮೈದೂರ್ ಪತ್ನಿ ಮಂಜುಳಾ( 45) ಆಕೆಯ ತಂಗಿ ರಾಜಲಕ್ಷ್ಮಿ ತಿಮ್ಮರಾಜಪ್ಪ(42) ಮತ್ತು ಮಂಜುಳಾರ ಅಕ್ಕನ ಮಗ ತಮಿಳುನಾಡಿನ ನಿವಾಸಿ ಜಗನ್ ವಿಶ್ವನಾಥನ್ (42)  ಬಂಧಿತ ಆರೋಪಿಗಳಾಗಿದ್ದಾರೆ.
 
ಪತ್ನಿ ಜತೆ ಬಾಬುರೆಡ್ಡಿ ಸಂಬಂಧ ಚೆನ್ನಾಗಿರಲಿಲ್ಲ. ಕೌಟುಂಬಿಕ ಕಲಹ ಮತ್ತು ಪತಿಯ ಅನೈತಿಕ ಸಂಬಂಧವೇ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
 
ಪತಿ ನೀಡುತ್ತಿದ್ದ ಮಾನಸಿಕ ಹಿಂಸೆಗೆ ರೋಸಿ ಹೋಗಿದ್ದ ಪತ್ನಿ ಮಂಜುಳಾ ಕಳೆದ ಎರಡು ತಿಂಗಳಿಂದ ಪತಿಯ ಕೊಲೆಗೆ ಸಂಚು ರೂಪಿಸಿದ್ದಳು. ಅಂತೆಯೇ ಅಕ್ಟೋಬರ್ 24 ರಂದು ಚಿಕ್ಕಮ್ಮನ ಮನೆಗೆ ಬಂದಿದ್ದ ಜಗನ್ ಆಕೆಯ ಪತಿಯ ಕತ್ತು ಸೀಳಿ ಪರಾರಿಯಾಗಿದ್ದ.
 
ಘಟನೆ ನಡೆದ ಮೂರು ದಿನಗಳಲ್ಲಿ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments