Webdunia - Bharat's app for daily news and videos

Install App

ವಿದ್ಯಾರ್ಥಿಗಳ ಶಿಕ್ಷಿಸುವ ಅಧಿಕಾರಕ್ಕೆ ಸರ್ಕಾರಕ್ಕೆ ಬೇಡಿಕೆಯಿಟ್ಟ ಶಿಕ್ಷಕರು: ಶಿಕ್ಷಕರ ಬೇಡಿಕೆ ಸರೀನಾ

Krishnaveni K
ಬುಧವಾರ, 27 ನವೆಂಬರ್ 2024 (10:29 IST)
ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಶಿಕ್ಷಕರಿಗೇ ವಿದ್ಯಾರ್ಥಿಗಳು ಕ್ವಾಟ್ಲೆ ಕೊಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ವಿದ್ಯಾರ್ಥಿಗಳಿಗೆ ಕನಿಷ್ಠ ಶಿಕ್ಷೆ ಕೊಡಲಾದರೂ ಅವಕಾಶ ಕೊಡಿ ಎಂದು ಶಿಕ್ಷಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಮೊನ್ನೆಯಷ್ಟೇ ಶಿಕ್ಷಣ ಸಚಿವರಿಗೆ ವಿದ್ಯಾರ್ಥಿಯೊಬ್ಬ ಆನ್ ಲೈನ್ ಸಂವಾದದ ವೇಳೆ ‘ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ’ ಎಂದು ಮಾನ ಕಳೆದಿದ್ದ. ಇತ್ತೀಚೆಗೆ ವಿದ್ಯಾರ್ಥಿಗಳಿಗೆ ಶಿಕ್ಷಕರೆಂದರೆ ಭಯವೇ ಇಲ್ಲವಾಗಿದೆ. ಇದರಿಂದಾಗಿ ಶಿಕ್ಷಕರಿಗೇ ಎದುರುತ್ತರ ಕೊಡುವ ಮತ್ತು ಅವರಿಗೇ ಕೀಟಲೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ.

ಮಕ್ಕಳ ವಕ್ರ ಬುದ್ಧಿಯನ್ನು ತಿದ್ದಲು ಶಿಕ್ಷಕರಿಗೆ ಅವಕಾಶವೇ ಇಲ್ಲವಾಗಿದೆ. ಹೀಗಾಗಿ ಅವಹೇಳನ ಮಾಡುವ, ಅಶಿಸ್ತು ತೋರುವ ವಿದ್ಯಾರ್ಥಿಗಳಿಗೆ ಕನಿಷ್ಠ ಮಟ್ಟದಲ್ಲಾದರೂ ಶಿಕ್ಷೆ ಕೊಡಲು ಶಿಕ್ಷಕರಿಗೆ ಅವಕಾಶ ನೀಡಬೇಕು ಎಂದು ಖಾಸಗಿ ಶಾಲಾ ಸಂಘಟನೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದೆ.

ಬಹುತೇಕ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ವರ್ತನೆಗೆ ಕಡಿವಾಣ ಹಾಕಲಾಗದೇ ಅಸಹಾಯಕ ಸ್ಥಿತಿ ವ್ಯಕ್ತಪಡಿಸುತ್ತವೆ. ಅಲ್ಲದೆ ಮಕ್ಕಳಿಗೆ ಶಿಕ್ಷೆ ನೀಡಬಾರದು ಎಂಬ ಕಾರಣಕ್ಕೆ ಪೋಷಕರೂ ಕೆಲವೊಮ್ಮೆ ಶಿಕ್ಷಕರ ವಿರುದ್ಧವೇ ದೂರು ನೀಡುವ ಘಟನೆಗಳೂ ಇವೆ. ತಪ್ಪು ಮಾಡಿದಾಗ ತಿದ್ದುವುದು ಶಿಕ್ಷಕರ ಕರ್ತವ್ಯ. ಆದರೆ ತಿದ್ದುವ ಅಧಿಕಾರವೇ ಶಿಕ್ಷಕರಿಗೆ ಇಲ್ಲ. ಇದು ಮರಳಿ ಬರಬೇಕೇ ನೀವೇ ಹೇಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments