Webdunia - Bharat's app for daily news and videos

Install App

ವಿದ್ಯಾರ್ಥಿಗಳ ಶಿಕ್ಷಿಸುವ ಅಧಿಕಾರಕ್ಕೆ ಸರ್ಕಾರಕ್ಕೆ ಬೇಡಿಕೆಯಿಟ್ಟ ಶಿಕ್ಷಕರು: ಶಿಕ್ಷಕರ ಬೇಡಿಕೆ ಸರೀನಾ

Krishnaveni K
ಬುಧವಾರ, 27 ನವೆಂಬರ್ 2024 (10:29 IST)
ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಶಿಕ್ಷಕರಿಗೇ ವಿದ್ಯಾರ್ಥಿಗಳು ಕ್ವಾಟ್ಲೆ ಕೊಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ವಿದ್ಯಾರ್ಥಿಗಳಿಗೆ ಕನಿಷ್ಠ ಶಿಕ್ಷೆ ಕೊಡಲಾದರೂ ಅವಕಾಶ ಕೊಡಿ ಎಂದು ಶಿಕ್ಷಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಮೊನ್ನೆಯಷ್ಟೇ ಶಿಕ್ಷಣ ಸಚಿವರಿಗೆ ವಿದ್ಯಾರ್ಥಿಯೊಬ್ಬ ಆನ್ ಲೈನ್ ಸಂವಾದದ ವೇಳೆ ‘ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ’ ಎಂದು ಮಾನ ಕಳೆದಿದ್ದ. ಇತ್ತೀಚೆಗೆ ವಿದ್ಯಾರ್ಥಿಗಳಿಗೆ ಶಿಕ್ಷಕರೆಂದರೆ ಭಯವೇ ಇಲ್ಲವಾಗಿದೆ. ಇದರಿಂದಾಗಿ ಶಿಕ್ಷಕರಿಗೇ ಎದುರುತ್ತರ ಕೊಡುವ ಮತ್ತು ಅವರಿಗೇ ಕೀಟಲೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ.

ಮಕ್ಕಳ ವಕ್ರ ಬುದ್ಧಿಯನ್ನು ತಿದ್ದಲು ಶಿಕ್ಷಕರಿಗೆ ಅವಕಾಶವೇ ಇಲ್ಲವಾಗಿದೆ. ಹೀಗಾಗಿ ಅವಹೇಳನ ಮಾಡುವ, ಅಶಿಸ್ತು ತೋರುವ ವಿದ್ಯಾರ್ಥಿಗಳಿಗೆ ಕನಿಷ್ಠ ಮಟ್ಟದಲ್ಲಾದರೂ ಶಿಕ್ಷೆ ಕೊಡಲು ಶಿಕ್ಷಕರಿಗೆ ಅವಕಾಶ ನೀಡಬೇಕು ಎಂದು ಖಾಸಗಿ ಶಾಲಾ ಸಂಘಟನೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದೆ.

ಬಹುತೇಕ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ವರ್ತನೆಗೆ ಕಡಿವಾಣ ಹಾಕಲಾಗದೇ ಅಸಹಾಯಕ ಸ್ಥಿತಿ ವ್ಯಕ್ತಪಡಿಸುತ್ತವೆ. ಅಲ್ಲದೆ ಮಕ್ಕಳಿಗೆ ಶಿಕ್ಷೆ ನೀಡಬಾರದು ಎಂಬ ಕಾರಣಕ್ಕೆ ಪೋಷಕರೂ ಕೆಲವೊಮ್ಮೆ ಶಿಕ್ಷಕರ ವಿರುದ್ಧವೇ ದೂರು ನೀಡುವ ಘಟನೆಗಳೂ ಇವೆ. ತಪ್ಪು ಮಾಡಿದಾಗ ತಿದ್ದುವುದು ಶಿಕ್ಷಕರ ಕರ್ತವ್ಯ. ಆದರೆ ತಿದ್ದುವ ಅಧಿಕಾರವೇ ಶಿಕ್ಷಕರಿಗೆ ಇಲ್ಲ. ಇದು ಮರಳಿ ಬರಬೇಕೇ ನೀವೇ ಹೇಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

Air India Plane crash: ವಿಮಾನ ದುರಂತ ವೀಕ್ಷಿಸಿ ರೀಲ್ಸ್ ಮಾಡ್ತೀರಾ, ಸಚಿವ ರಾಮಮೋಹನ್ ನಾಯ್ಡುಗೆ ತರಾಟೆ

Air India plane crash: ವಿಮಾನ ಪತನಕ್ಕೆ ಇದೇ ಕಾರಣನಾ

ಮುಂದಿನ ಸುದ್ದಿ
Show comments