Webdunia - Bharat's app for daily news and videos

Install App

ಬಿಇಓ ಕಚೇರಿಯಲ್ಲೇ ಹೊಡೆದಾಡಿಕೊಂಡ ಶಿಕ್ಷಕರು!

Webdunia
ಸೋಮವಾರ, 21 ಜನವರಿ 2019 (16:11 IST)
ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಮ್ಮುಖದಲ್ಲಿಯೇ  ಶಿಕ್ಷಕರು ಪರಸ್ಪರ ಹಲ್ಲೆ ಮಾಡಿಕೊಂಡ ಘಟನೆ ನಡೆದಿದೆ.

ಕೋಲಾರದ ಮಾಲೂರಿನ ಬಿಇಓ ಕಚೇರಿಯಲ್ಲಿ ಶಿಕ್ಷಕರ ಗಲಾಟೆ, ಹಲ್ಲೆ ಪ್ರಕರಣ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿಯೇ ಈ ಘಟನೆ ನಡೆದಿದೆ.

ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ನರಸಿಂಹ ಹಲ್ಲೆಗೊಳಗಾದ ಶಿಕ್ಷಕನಾಗಿದ್ದಾನೆ. ಗುರುಭವನ ನಿರ್ಮಾಣ ಸಮಿತಿ ಕಾರ್ಯದರ್ಶಿ ಸಿ.ಎಂ.ನಾರಾಯಣಸ್ವಾಮಿ ಹಲ್ಲೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ.

ಬಿಇಓ ಮಾಧವರೆಡ್ಡಿ ಎದುರಲ್ಲಿಯೇ ಗುರು ಭವನ ನಡಾವಳಿ ಪುಸ್ತಕ ಕಚೇರಿಯಲ್ಲಿ ಇಡುವ ವಿಷಯ ಕುರಿತು ಗಲಾಟೆ ನಡೆದಿದೆ.
ಗಲಾಟೆಯಲ್ಲಿ ಎದೆಗೆ ಗಾಯವಾಗಿದೆ ಎಂದು ಮಾಲೂರು ಸರ್ಕಾರಿ ಆಸ್ಪತ್ರೆಗೆ  ಶಿಕ್ಷಕ ನರಸಿಂಹ ದಾಖಲಾಗಿದ್ದಾರೆ.

ಬಿಇಓ ಆದೇಶಕ್ಕೂ ಕ್ಯಾರೆ ಎನ್ನದ ಶಿಕ್ಷಕರು, ಬಿಇಓ ಎದುರಲ್ಲಿಯೇ ಒಣ ಪ್ರತಿಷ್ಠೆಗಾಗಿ ಹೊಡೆದಾಡಿಕೊಂಡಿದ್ದಾರೆ.
ಮಾಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಕೆಆರ್‌ 45 ಅಂಬಾಸಿಡರ್ ಕಾರಿನ ಜತೆಗಿನ ಹಿರಿಯ ನಾಯಕರ ಒಡನಾಟ ಬಿಚ್ಚಿಟ್ಟ ವಿಜಯೇಂದ್ರ

ಇಂಡಿಗೋ ಕ್ಯಾಬಿನ್ ಸಿಬ್ಬಂದಿಯೊಂದಿಗೆ ಪ್ರಯಾಣಿಕನ ಅನುಚಿತ ವರ್ತನೆ, ಮುಂದೇನಾಯ್ತು ಗೊತ್ತಾ

ಬಂಗಾಳದಲ್ಲಿ ಒಬ್ಬ ಬಿಜೆಪಿ ಶಾಸಕನೂ ಇರಲ್ಲ: ವಿಧಾನಸಭೆಯಲ್ಲಿ ಗುಡುಗಿದ ಮಮತಾ ಬ್ಯಾನರ್ಜಿ

ಧರ್ಮಸ್ಥಳ ಪ್ರಕರಣ: ಅಮಿತ್ ಶಾ ಭೇಟಿಯಾದ ಸನಾತನ ಸಂತ ನಿಯೋಗ

ದಸರಾ ಉದ್ಘಾಟಕರಿಗೆ ಚಾಮುಂಡಿ ಇತಿಹಾಸ, ಆರಾಧನೆ ಮೊದಲು ತಿಳಿಸಲಿ: ವಿ ಸೋಮಣ್ಣ

ಮುಂದಿನ ಸುದ್ದಿ
Show comments