Webdunia - Bharat's app for daily news and videos

Install App

ಬಿಇಓ ಕಚೇರಿಯಲ್ಲೇ ಹೊಡೆದಾಡಿಕೊಂಡ ಶಿಕ್ಷಕರು!

Webdunia
ಸೋಮವಾರ, 21 ಜನವರಿ 2019 (16:11 IST)
ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಮ್ಮುಖದಲ್ಲಿಯೇ  ಶಿಕ್ಷಕರು ಪರಸ್ಪರ ಹಲ್ಲೆ ಮಾಡಿಕೊಂಡ ಘಟನೆ ನಡೆದಿದೆ.

ಕೋಲಾರದ ಮಾಲೂರಿನ ಬಿಇಓ ಕಚೇರಿಯಲ್ಲಿ ಶಿಕ್ಷಕರ ಗಲಾಟೆ, ಹಲ್ಲೆ ಪ್ರಕರಣ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿಯೇ ಈ ಘಟನೆ ನಡೆದಿದೆ.

ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ನರಸಿಂಹ ಹಲ್ಲೆಗೊಳಗಾದ ಶಿಕ್ಷಕನಾಗಿದ್ದಾನೆ. ಗುರುಭವನ ನಿರ್ಮಾಣ ಸಮಿತಿ ಕಾರ್ಯದರ್ಶಿ ಸಿ.ಎಂ.ನಾರಾಯಣಸ್ವಾಮಿ ಹಲ್ಲೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ.

ಬಿಇಓ ಮಾಧವರೆಡ್ಡಿ ಎದುರಲ್ಲಿಯೇ ಗುರು ಭವನ ನಡಾವಳಿ ಪುಸ್ತಕ ಕಚೇರಿಯಲ್ಲಿ ಇಡುವ ವಿಷಯ ಕುರಿತು ಗಲಾಟೆ ನಡೆದಿದೆ.
ಗಲಾಟೆಯಲ್ಲಿ ಎದೆಗೆ ಗಾಯವಾಗಿದೆ ಎಂದು ಮಾಲೂರು ಸರ್ಕಾರಿ ಆಸ್ಪತ್ರೆಗೆ  ಶಿಕ್ಷಕ ನರಸಿಂಹ ದಾಖಲಾಗಿದ್ದಾರೆ.

ಬಿಇಓ ಆದೇಶಕ್ಕೂ ಕ್ಯಾರೆ ಎನ್ನದ ಶಿಕ್ಷಕರು, ಬಿಇಓ ಎದುರಲ್ಲಿಯೇ ಒಣ ಪ್ರತಿಷ್ಠೆಗಾಗಿ ಹೊಡೆದಾಡಿಕೊಂಡಿದ್ದಾರೆ.
ಮಾಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments