Webdunia - Bharat's app for daily news and videos

Install App

ವಿದ್ಯಾರ್ಥಿಗೆ ಬೂಟ್ ಕಾಲಿನಿಂದ ಒದಿಸಿದ್ರು ಶಿಕ್ಷಕರು!

Webdunia
ಶುಕ್ರವಾರ, 28 ಜೂನ್ 2019 (18:24 IST)
ಪಾಠ ಹೇಳಿಕೊಡಬೇಕಾದ ಶಿಕ್ಷಕರೇ ವಿದ್ಯಾರ್ಥಿಗೆ  ಬೂಟ್ ಕಾಲಿನಿಂದ ಒದೆಸಿದ್ದು, ಶಿಕ್ಷಕ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ.  
ಎರಡನೇ ತರಗತಿ ವಿದ್ಯಾರ್ಥಿಗೆ ಬೂಟ್ ಕಾಲಿನಿಂದ ಒದೆಸಿದ ಶಿಕ್ಷೆ ನೀಡಲಾಗಿದೆ. ಮಾಡಿದ ಸಣ್ಣ ತಪ್ಪಿಗೆ ವಿದ್ಯಾರ್ಥಿಗೆ ಬೂಟ್ ಪೂಜೆ ಮಾಡಿದ್ದಾರೆ ಆಡಳಿತ ಮಂಡಳಿಯವರು.

ಒಬ್ಬ  ವಿದ್ಯಾರ್ಥಿಗೆ 40 ಜನ ವಿದ್ಯಾರ್ಥಿಗಳಿಂದ ಬೂಟ್ ಕಾಲಿನಿಂದ ಒದೆಸಿದ್ದಾರೆ ಶಿಕ್ಷಕರು. 2 ನೇ ತರಗತಿ ವಿದ್ಯಾರ್ಥಿಯ  ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಲಾಗಿದೆ.

ಶಾಲಾ ಸಿಬ್ಬಂದಿಯ ದಬ್ಬಾಳಿಕೆ ಬೇಸತ್ತ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬೂರಮಾಕನಹಳ್ಳಿ ಬಳಿ ಇರುವ ಜೋತಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಘಟನೆ ನಡೆದಿದೆ.

ಮುಂಜಾನೆ 8 ರಿಂದ ಬಿಸಿಲನಲ್ಲಿಯೇ ವಿದ್ಯಾರ್ಥಿಯನ್ನು ನಿಲ್ಲಿಸಿದ್ದಾರೆ ಶಾಲಾ ಸಿಬ್ಬಂದಿ. ಪೋಷಕರನ್ನು  ಹತ್ತನೇ ತರಗತಿ ವಿದ್ಯಾರ್ಥಿಗಳಿಂದ‌ ಹೊರದಬ್ಬಿಸಿದ್ದಾರೆ ಆಡಳಿತ ಮಂಡಳಿಯವರು. ಇಲ್ಲಿಗೆ ಪಿಎಂ ಬಂದ್ರು ನೋ ಎಂಟ್ರಿ ಎಂದು ಸರ್ವಾಧಿಕಾರ ತೋರಿದ್ದಾರೆ ಶಾಲಾ ಆಡಳಿತ ಮಂಡಳಿಯವರು ಅಂತ ಪೋಷಕರು ದೂರಿದ್ದಾರೆ.

ಶಾಲಾ ಮ್ಯಾನೆಜಮೆಂಟ್ ಶಪೀ ಯಿಂದ‌ ಹಿಂಟ್ಲರ್ ಆಡಳಿತ ನಡೆಯುತ್ತಿದೆ ಎಂದು ಟೀಕೆ ಮಾಡಲಾಗಿದೆ. ಶಾಲಾ ಆಡಳಿತ ಮಂಡಳಿ ಧೋರಣೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಪೋಷಕರು ಮತ್ತು ಪೊಲೀಸರ ನಡುವೆ ನೂಕುನುಗ್ಗಲು ಉಂಟಾಗಿತ್ತು. ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments