Webdunia - Bharat's app for daily news and videos

Install App

ಶಿಕ್ಷಕರಲ್ಲೂ ಕೂಡ ಕ್ವಾಲಿಟಿ ಇರಬೇಕು- ಡಿಕೆಶಿವಕುಮಾರ್

Webdunia
ಸೋಮವಾರ, 25 ಡಿಸೆಂಬರ್ 2023 (14:00 IST)
ಬಿಬಿಎಂಪಿ ಶಾಲೆಗಳ ಗುತ್ತಿಗೆ ಆಧಾರದ ಶಿಕ್ಷಕರು ಭೇಟಿಯಾದ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಗುತ್ತಿಗೆ ಶಿಕ್ಷಕರು ಬಂದು ಭೇಟಿ ಮಾಡಿದ್ದಾರೆ .ಅವರು ನಮ್ಮನ್ನೇ ಮುಂದುವರಿಸಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

ನಮ್ಮ ಶಿಕ್ಷಣ ಇಲಾಖೆಯವರು ಯಾಕೆ ಜವಾಬ್ದಾರಿ ತೆಗೆದುಕೊಂಡಿದ್ದೇವೆ ಎಂದರೆ ಬಿಬಿಎಂಪಿ ಶಾಲೆಗಳ ಶಿಕ್ಷಣದ ಗುಣಮಟ್ಟ ಕಡಿಮೆಯಾಗಿದೆ.ಕೆಲವು ಸೆಕ್ಯೂರಿಟಿ ಏಜೆನ್ಸಿಗಳು ಟೀಚರ್ಸ್‌ಗಳನ್ನು ಪೂರೈಕೆ ಮಾಡುತ್ತಿದ್ದಾರೆ ಎಂದು ಮಾಹಿತಿ ಇದೆ.ಯಾರ್ಯಾರು ಏನೇನು ಕೆಲಸ ಮಾಡಬೇಕು ಅದನ್ನೇ ಮಾಡಬೇಕು.ಸೆಕ್ಯೂರಿಟಿ ಏಜೆನ್ಸಿಯವರು ಶಿಕ್ಷಕರನ್ನು ಒದಗಿಸುವ ಕೆಲಸ ಆಗಬಾರದು ಹೀಗಾಗಿ ನಮ್ಮ ಶಿಕ್ಷಣ ಇಲಾಖೆಗೆ ಹೇಳಿದ್ದೇವೆ .
 
ನಾನು ಕೆಲ ಅಧಿಕಾರಿಗಳಿಗೂ ಹೇಳಿದ್ದೇನೆ.ಯಾರ್ಯಾರು ಚೆನ್ನಾಗಿ ಪಾಠ ಮಾಡುತ್ತಾರೆ.ಯಾರು ಗುಣಮಟ್ಟ ಉಳಿಸಿಕೊಂಡಿದ್ದಾರೆ ಅವರಿಗೆ ಪ್ರಾತಿನಿಧ್ಯ ಕೊಡಿ ಎಂದು ಹೇಳಿದ್ದೇನೆ.ಅವರಿಗೆ ಏನು ಸಹಾಯ ಮಾಡಬಹುದು ಅನ್ನೋದನ್ನ ಬಿಬಿಎಂಪಿ ವತಿಯಿಂದ ಮಾಡುತ್ತೇವೆ.ಶಾಲೆಗಳಲ್ಲಿ ಬಿಬಿಎಂಪಿ ಎಲ್ಲ ಮೂಲಭೂತ ಸೌಕರ್ಯ ಒದಗಿಸುತ್ತದೆ.ಗುಣಮಟ್ಟ ಕೊಡಬೇಕಾಗಿದ್ದು ನಮ್ಮ ಕರ್ತವ್ಯ.ಶಿಕ್ಷಕರಲ್ಲೂ ಕೂಡ ಕ್ವಾಲಿಟಿ ಇರಬೇಕು ಎನ್ನುವ ದೃಷ್ಟಿಯಿಂದ ಈ ತೀರ್ಮಾನ ಮಾಡಿದ್ದೇವೆ ಎಂದು ಡಿಕೆಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments