Webdunia - Bharat's app for daily news and videos

Install App

ಸಂಪುಟದಿಂದ ಕಿತ್ತು ಹಾಕಿ : ಸಿದ್ದರಾಮಯ್ಯ

Webdunia
ಶುಕ್ರವಾರ, 24 ಜೂನ್ 2022 (12:12 IST)
ಬೆಂಗಳೂರು : 2024ಕ್ಕೆ ಕರ್ನಾಟಕ ಇಬ್ಭಾಗವಾಗೋದು ಖಚಿತ ಎಂಬ ಸಚಿವ ಉಮೇಶ್ ಕತ್ತಿ ಮಾತಿಗೆ ಪಕ್ಷಾತೀತವಾಗಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಉಮೇಶ್ ಕತ್ತಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕನ್ನಡಿಗರ ಅವಿರತ ಹೋರಾಟದ ಫಲವಾಗಿ ಕರ್ನಾಟಕ ಸ್ಥಾಪನೆಯಾಗಿದೆ. ಕರ್ನಾಟಕವನ್ನು ಒಡೆಯುವ ಯೋಚನೆ ಮಾಡುವುದೇ ನಾಡು-ನುಡಿಗೆ ಬಗೆವ ದ್ರೋಹವಾಗುತ್ತದೆ.

ಸಚಿವರಾದ ಉಮೇಶ್ ಕತ್ತಿಯವರು ಜವಾಬ್ದಾರಿ ಸ್ಥಾನದಲ್ಲಿರುವವರು. ಪಕ್ಷ ಇಲ್ಲವೆ ಸರ್ಕಾರದ ಮಟ್ಟದಲ್ಲಿ ಅಂತಹ ಚರ್ಚೆ ನಡೆಯದೆ, ರಾಜ್ಯ ಒಡೆಯುವ ಯೋಜನೆಯ ಬಗ್ಗೆ ಮಾತನಾಡಿರಲಾರರು. ಅವರು ಹೇಳಿರುವುದು ಸುಳ್ಳಾಗಿದ್ದರೆ ಇಂತಹ ಬೇಜವಾಬ್ದಾರಿ ಹೇಳಿಕೆಗಾಗಿ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. 

ಇದರ ಸತ್ಯಾಸತ್ಯತೆಗಳನ್ನು ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಬೊಮ್ಮಾಯಿ ಅವರು ಸ್ಪಷ್ಟಪಡಿಸಬೇಕು ಸಿದ್ದರಾಮಯ್ಯ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ. ಈ ವಿವಾದದಿಂದ ಬಿಜೆಪಿ ಅಂತರ ಕಾಯ್ದುಕೊಂಡಿದೆ. ಈ ಬಗ್ಗೆ ಕತ್ತಿಯನ್ನೇ ಕೇಳಿ.. ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments