Webdunia - Bharat's app for daily news and videos

Install App

ಪ್ರಿಯಕರನಿಂದಲೇ ಸುಟ್ಟು ಕರಕಲಾದ ಯುವತಿ

Webdunia
ಬುಧವಾರ, 9 ಮಾರ್ಚ್ 2022 (09:00 IST)
ಮಂಡ್ಯ: ಕಾಲೇಜಿಗೆ ಹೋಗುತ್ತೇನೆಂದು ಮನೆ ಬಿಟ್ಟಿದ್ದ ಯುವತಿ ಅಜ್ಞಾತ ಸ್ಥಳದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಿಯಕರನೇ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ.

ಕಾಲೇಜಿಗೆ ಹೋಗುತ್ತೇನೆಂದು ಮನೆ ಬಿಟ್ಟಿದ್ದ ಯುವತಿ ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಗಾಬರಿಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.

ಯುವತಿ ನಾಪತ್ತೆಯಾದ ದಿನವೇ ಆಕೆಯನ್ನು ಪ್ರೀತಿಸುತ್ತಿದ್ದ ಯುವಕನೂ ನಾಪತ್ತೆಯಾಗಿದ್ದ. ಹೀಗಾಗಿ ಮನೆಯವರು ಆತನ ಮೇಲೆ ಕಿಡ್ನ್ಯಾಪ್ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಮನವಿ ಮಾಡಿದ್ದರು. ಆದರೆ ಪೊಲೀಸರು ಮಿಸ್ಸಿಂಗ್ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. ಈ ನಡುವೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಯುವತಿಯ ದೇಹ ಪತ್ತೆಯಾಗಿತ್ತು. ಈ ಮೃತದೇಹವನ್ನು ಅನಾಥ ಶವವೆಂದು ಪೊಲೀಸರೇ ಅಂತ್ಯ ಸಂಸ್ಕಾರ ನಡೆಸಿ, ಯುವತಿ ಮೇಲಿದ್ದ ಉಂಗುರ, ಓಲೆಯನ್ನು ಸಂತ್ರಸ್ತ ಯುವತಿಯ ಪೋಷಕರಿಗೆ ಕಳುಹಿಸಿ ಗುರುತಿಸಲು ಕೇಳಿದ್ದಾರೆ. ಆಭರಣ ನೋಡಿದರೆ ಪೋಷಕರಿಗೆ ಇದು ತಮ್ಮ ಮಗಳದ್ದೇ ಎಂದು ಗೊತ್ತಾಗಿದೆ. 

ಎಲ್ಲಾ ಸಾಕ್ಷ್ಯಗಳಿದ್ದೂ ಪೊಲೀಸರು ಇದುವರೆಗೆ ಆರೋಪಿಯನ್ನು ಬಂಧಿಸಿಲ್ಲ. ಅತ್ತ ಆರೋಪಿಯೂ ನಾಪತ್ತೆಯಾಗಿದ್ದಾನೆ ಎಂದು ಆತನ ಮನೆಯವರೇ ಆಪಾದಿಸಿದ್ದಾರೆ. ಇದೀಗ ಆರೋಪಿಗೆ ಶಿಕ್ಷೆಯಾಗಬೇಕೆಂದು ಯುವತಿಯ ಮನೆಯವರು ಹೋರಾಡುವ ಪರಿಸ್ಥಿತಿ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments