Webdunia - Bharat's app for daily news and videos

Install App

ಕಾನೂನು ಬಾಹಿರ ಕೆಲಸ ಮಾಡಿದ ತಹಸೀಲ್ದಾರ್ ಸಸ್ಪೆಂಡ್

Webdunia
ಬುಧವಾರ, 23 ಅಕ್ಟೋಬರ್ 2019 (18:21 IST)
ನಿಯಮ ಬಾಹಿರವಾಗಿ ಮತ್ತು ಅಧಿಕಾರ ವ್ಯಾಪ್ತಿ ಮೀರಿ ಕೆಲಸ ಮಾಡಿದ ತಹಸೀಲ್ದಾರ್ ಒಬ್ಬರು ಸೇವೆಯಿಂದ ಅಮಾನತ್ ಆಗಿದ್ದಾರೆ.

ನಿಯಮ ಬಾಹಿರ ಹಾಗೂ ಅಧಿಕಾರ ವ್ಯಾಪ್ತಿ ಮೀರಿ ಖಾತಾ ವರ್ಗಾವಣೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ  ಆಳಂದ ತಾಲೂಕಿನ ಖಜೂರಿ ನಾಡ ಕಚೇರಿಯ ಉಪ ತಹಶೀಲ್ದಾರ ಗುರುಲಿಂಗಯ್ಯ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ. ಹೀಗಂತ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ್  ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಭೂ ಕಂದಾಯ ನಿಯಮಗಳು 1966 ನಿಯಮ 43ನ್ನು ಉಲ್ಲಂಘಿಸಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ನಡೆಸಲು ಉಪ ತಹಶೀಲ್ದಾರ ಗುರುಲಿಂಗಯ್ಯ ಅವರನ್ನು ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 10 (1) (ಡಿ) ಅಡಿಯಲ್ಲಿ ಕೂಡಲೇ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಿ ಆದೇಶ ಹೊರಡಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments