Webdunia - Bharat's app for daily news and videos

Install App

ಆಷಾಢ ಶುಕ್ರವಾರ ಮನೆಗೆ ಹೊಸ ಅತಿಥಿ ಬರಮಾಡಿಕೊಂಡ ತೇಜಸ್ವಿ ಸೂರ್ಯ ದಂಪತಿ: ವಿಡಿಯೋ

Krishnaveni K
ಶನಿವಾರ, 5 ಜುಲೈ 2025 (13:00 IST)
ಬೆಂಗಳೂರು: ಆಷಾಢ ಶುಕ್ರವಾರದಂದು ಸಂಸದ ತೇಜಸ್ವಿ ಸೂರ್ಯ ದಂಪತಿ ಮನೆಗೆ ಹೊಸ ಅತಿಥಿಯೊಂದನ್ನು ಬರಮಾಡಿಕೊಂಡಿದ್ದಾರೆ. ಈ ವಿಡಿಯೋ ಇಲ್ಲಿದೆ ನೋಡಿ.

ತೇಜಸ್ವಿ ಸೂರ್ಯ ಮತ್ತು ಪತ್ನಿ, ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಇತ್ತೀಚೆಗಷ್ಟೇ ಮದುವೆಯಾದವರು. ಇದು ನವ ದಂಪತಿಗಳಿಗೆ ಮೊದಲ ಆಷಾಢ ಶುಕ್ರವಾರ. ಇಬ್ಬರೂ ಧಾರ್ಮಿಕ ನಂಬಿಕೆ, ಶ್ರದ್ಧೆಯುಳ್ಳವರು. ಹೀಗಾಗಿ ಆಷಾಢ ಶುಕ್ರವಾರಕ್ಕೆ ವಿಶೇಷ ಅತಿಥಿಯನ್ನೇ ಮನೆಗೆ ಬರಮಾಡಿಕೊಂಡಿದ್ದಾರೆ.

ತೇಜಸ್ವಿ ತಮ್ಮ ಮನೆಗೆ ಪುಟಾಣಿ ಕರುವೊಂದನ್ನು ಕರೆತಂದಿದ್ದು ಇದರ ಮುಂದೆ ಕೂತು ತೇಜಸ್ವಿ ಪತ್ನಿ ಶಿವಶ್ರೀ ಕೃಷ್ಣನ ಕುರಿತಾದ ದೇವರ ನಾಮವೊಂದನ್ನು ಹಾಡಿ ಕರುವನ್ನು ಮುದ್ದು ಮಾಡಿದ್ದಾರೆ. ಆಷಾಢ ಶುಕ್ರವಾರದಂದು ತಮ್ಮ ಮನೆಗೆ ಮಹಾಲಕ್ಷ್ಮಿಯನ್ನು ಬರಮಾಡಿಕೊಂಡಿದ್ದೇವೆ. ಈಕೆ ದೈವ ಸ್ವರೂಪಿ. ಅವಳಿಗೆ ಲಕ್ಷ್ಮಿ, ಗೌರಿ ಹೀಗೆ ಹಲವು ಹೆಸರುಗಳಿಂದ ಕರೆಯುತ್ತೇವೆ ಎಂದು ತೇಜಸ್ವಿ ಹೇಳಿಕೊಂಡಿದ್ದಾರೆ. ಪುಂಗನೂರು ತಳಿಯ ಈ ಕರುವನ್ನು ಆಂಧ್ರಪ್ರದೇಶದ ಬಿಜೆಪಿ ನಾಯಕ ವಂಶಿ ಕೃಷ್ಣ ನಾಲ್ಕು ದಿನಗಳ ಹಿಂದೆ ತೇಜಸ್ವಿ ಸೂರ್ಯಗೆ ಉಡುಗೊರೆಯಾಗಿ ನೀಡಿದ್ದರು.

ಈ ಮುದ್ದಾದ ವಿಡಿಯೋಗೆ ಸಾಕಷ್ಟು ಜನ ಕಾಮೆಂಟ್ ಮಾಡಿದ್ದು ಸರಿಯಾದ ಆಯ್ಕೆಯನ್ನೇ ಮಾಡಿದ್ದೀರಿ. ಕರು ಅಂತೂ ಮುದ್ದಾಗಿದೆ ಎಂದಿದ್ದಾರೆ. ಜೊತೆಗೆ ಕರುವಿನ ರೂಪದಲ್ಲಿ ನಿಮ್ಮ ಮನೆಗೆ ಮಹಾಲಕ್ಷ್ಮಿ ಬಂದು ನೆಲೆಸಲಿ ಎಂದು ಹಾರೈಸಿದ್ದಾರೆ.

 
 
 
 
 
 
 
 
 
 
 
 
 
 
 

A post shared by Tejasvi Surya (@tejasvisurya)

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಯಾನಿಟರಿ ಪ್ಯಾಡ್ ನಲ್ಲೂ ರಾಹುಲ್ ಗಾಂಧಿ ಫೋಟೋ: ಟ್ರೋಲ್ ಆದ ಕಾಂಗ್ರೆಸ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ: ತಜ್ಞರ ಸಮಿತಿ ವರದಿ ಲೀಕ್

ಹೃದಯದ ಸಮಸ್ಯೆಗೂ ಗ್ಯಾಸ್ಟ್ರಿಕ್ ನೋವಿಗೂ ಇರುವ ವ್ಯತ್ಯಾಸವೇನು ತಿಳಿಯಿರಿ

ಮುಂದಿನ ಸುದ್ದಿ
Show comments