Webdunia - Bharat's app for daily news and videos

Install App

ಹೆಬ್ಬಾಳ ಫ್ಲೈ ಓವರ್ ಉದ್ಘಾಟನೆ ವೇಳೆಯೇ ಟ್ರಾಫಿಕ್ ಜಾಮ್: ತೇಜಸ್ವಿ ಸೂರ್ಯ ಅಸಮಾಧಾನ

Krishnaveni K
ಸೋಮವಾರ, 18 ಆಗಸ್ಟ್ 2025 (14:47 IST)
ಬೆಂಗಳೂರು: ಇಂದು ಕೆಆರ್ ಪುರಂ ಕಡೆಯಿಂದ ಮೇಖ್ರಿ ಸರ್ಕಲ್ ಕಡೆಗೆ ಹೋಗುವ ಹೆಬ್ಬಾಳ ಫ್ಲೈಓವರ್ ರಸ್ತೆಯನ್ನು ಸಿಎಂ ಸಿದ್ದರಾಮಯತ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಉದ್ಘಾಟಿಸಿದ್ದಾರೆ. ಆದರೆ ಈ ವೇಳೆಯೇ ವಿಪರೀತ ಟ್ರಾಫಿಕ್ ಜಾಮ್ ಆಗಿದ್ದು ಸಂಸದ ತೇಜಸ್ವಿ ಸೂರ್ಯ ಅಸಮಾಧಾನ ಹೊರಹಾಕಿದ್ದಾರೆ.

ಫ್ಲೈ ಓವರ್ ಉದ್ಘಾಟನೆ ನಿಮಿತ್ತ ರಸ್ತೆಯಲ್ಲಿ ಸಂಚಾರ ಮಾಡಲು ನಿರ್ಬಂಧ ಹೇರಲಾಗಿತ್ತು. ಇಂದು ಸೋಮವಾರವಾಗಿದ್ದು ಬೆಳಿಗ್ಗಿನ ಹೊತ್ತು ಅನೇಕ ಜನ ಕಚೇರಿ, ಶಾಲಾ-ಕಾಲೇಜು ನಿಮಿತ್ತ ಓಡಾಡುವ ಸಂದರ್ಭವಾಗಿದೆ.

ಆದರೆ ಈ ಹೊತ್ತಿನಲ್ಲೇ ಫ್ಲೈ ಓವರ್ ಉದ್ಘಾಟನೆ ಕಾರ್ಯಕ್ರವಿಟ್ಟುಕೊಂಡಿದ್ದರಿಂದ ಸಾಕಷ್ಟು ಜನ ಪರದಾಡಿದರು. ಜೊತೆಗೆ ಟ್ರಾಫಿಕ್ ದಟ್ಟಣೆ ಹೆಚ್ಚಾಯ್ತು. ಇದರಿಂದ ಜನ ಸರ್ಕಾರಕ್ಕೆ ಹಿಡಿ ಶಾಪ ಹಾಕುವಂತಾಯಿತು. ಇದರ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಕೂಡಾ ಟ್ವೀಟ್ ಮಾಡಿ ಅಸಮಾಧಾನ ಹೊರಹಾಕಿದ್ದಾರೆ.

ಇಂತಹದ್ದೊಂದು ಉದ್ಘಾಟನಾ ಕಾರ್ಯಕ್ರಮವನ್ನು ಸೋಮವಾರ ಅದೂ ಜನದಟ್ಟಣೆ ಹೆಚ್ಚಿರುವ ಬೆಳಿಗಿನ ಹೊತ್ತು ಮಾಡುವ ಅವಶ್ಯಕತೆಯಿತ್ತೇ? ಎಂದು ಕಿಡಿ ಕಾರಿದ್ದಾರೆ. ಸಾಮಾನ್ಯವಾಗಿ ಇಂತಹ ಉದ್ಘಾಟನಾ ಕಾರ್ಯಕ್ರಮಗಳನ್ನು ಭಾನುವಾರ ಮಾಡಲಾಗುತ್ತದೆ. ಆದರೆ ಸೋಮವಾರ ಬ್ಯುಸಿ ಹೊತ್ತಿನಲ್ಲಿ ಮಾಡಿದ್ದು ಅಸಮಾಧಾನಕ್ಕೆ ಕಾರಣವಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಾಮಳೆಗೆ ಮುಂಬೈ ತತ್ತರ: ಜನಜೀವನ ಅಸ್ತವ್ಯಸ್ತ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖವಾಡ ಕಳಚಿಬಿತ್ತು: ಇಷ್ಟು ದಿನದ ಶೋಧಕ್ಕೆ ಬಿಗ್ ಟ್ವಿಸ್ಟ್

ಧರ್ಮಸ್ಥಳ ಕೇಸ್ ಗೆ ಮಹತ್ವದ ತಿರುವು: ಮಹೇಶ್ ಶೆಟ್ಟಿ ತಿಮರೋಡಿ ಬಂಧನ ಸಾಧ್ಯತೆ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಹೃದಯಾಘಾತ ತಡೆಯಲು ಮೂರು ಪರೀಕ್ಷೆಗಳು ಕಡ್ಡಾಯ

ಮುಂದಿನ ಸುದ್ದಿ
Show comments