Select Your Language

Notifications

webdunia
webdunia
webdunia
webdunia

Tejasvi Surya: ಪಕ್ಕದ ರಾಜ್ಯದಲ್ಲಿ ಆನೆ ತುಳಿದು ಸತ್ತವರಿಗೆ 20 ಲಕ್ಷ ರಾಜ್ಯ ಸರ್ಕಾರ ನಮ್ಮವರಿಗೆ ಕೊಡೋದು 10 ಲಕ್ಷ ಮಾತ್ರ

Tejasvi Surya

Krishnaveni K

ಬೆಂಗಳೂರು , ಸೋಮವಾರ, 28 ಏಪ್ರಿಲ್ 2025 (17:19 IST)
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಮಾನವೀಯತೆಯ ಲವಲೇಶವಾದರೂ ಇದ್ದರೆ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಎರಡೂ ಕುಟುಂಬಕ್ಕೆ ಕನಿಷ್ಠ 1 ಕೋಟಿಯನ್ನಾದರೂ ಕೊಡುತ್ತಿದ್ದರು ಎಂದು ಬೆಂಗಳೂರು ದಕ್ಷಿಣ ಸಂಸದ ಹಾಗೂ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ತಿಳಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆ ಮೊತ್ತವನ್ನು ಬ್ಯಾಂಕಿನಲ್ಲಿ ನಿರಖು ಠೇವಣಿ (ಎಫ್‍ಡಿ) ಇಟ್ಟರೆ ಅದರ ಬಡ್ಡಿಯಿಂದ ಅವರ ಕುಟುಂಬ, ಶಿಕ್ಷಣ ನಡೆಯುತ್ತಿತ್ತು. ಪಕ್ಕದ ರಾಜ್ಯದಲ್ಲಿ ಆನೆ ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟವರಿಗೆ ಈ ರಾಜ್ಯದ ಮುಖ್ಯಮಂತ್ರಿಗಳು 15 ಲಕ್ಷ ಕೊಟ್ಟಿದ್ದರು. ಆದರೆ, ನಮ್ಮ ರಾಜ್ಯದಲ್ಲಿ ಭೀಭತ್ಸವಾಗಿ, ಭೀಕರವಾಗಿ ಭಯೋತ್ಪಾದಕರ ದಾಳಿಯಲ್ಲಿ ಮೃತರಾದ ಇಬ್ಬರು ಕುಟುಂಬದವರಿಗೆ ಅದಕ್ಕಿಂತ ಜಾಸ್ತಿ ಅಲ್ಲ; ಅಷ್ಟಾದರೂ ಕೊಡುವ ಯೋಗ್ಯತೆ ಈ ಸರಕಾರಕ್ಕೆ ಇಲ್ಲವಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮುಸ್ಲಿಂ ಓಟಿಗೆ ತಮ್ಮನ್ನು ತಾವು ಮಾರಿಕೊಂಡ ಕಾಂಗ್ರೆಸ್ ಪಕ್ಷದಿಂದ ನಾವು ಇದಕ್ಕಿಂತ ಜಾಸ್ತಿ ನಿರೀಕ್ಷೆ ಮಾಡಲು ಸಾಧ್ಯವೇ ಇಲ್ಲ; ಈ ಕುಟುಂಬಗಳಿಗೆ ಶಕ್ತಿ ಕೊಡುವ ಜವಾಬ್ದಾರಿ ಹಿಂದೂ ಸಮಾಜಕ್ಕೆ ಇದೆ. ಭಯೋತ್ಪಾದಕರ ಕೃತ್ಯ ಖಂಡಿಸಿ ಮೊನ್ನೆ ಬೆಂಗಳೂರು ದಕ್ಷಿಣದಲ್ಲಿ ನಾವು ಪಂಜಿನ ಮೆರವಣಿಗೆ ಮಾಡಿದ್ದೇವೆ. ರಾಜ್ಯ ಸರಕಾರ ಕೊಟ್ಟ ಪರಿಹಾರಕ್ಕಿಂತ ಒಂದು ರೂ. ಹೆಚ್ಚು ಪರಿಹಾರವನ್ನು ಸಂಗ್ರಹಿಸಿ ಕೊಡಬೇಕೆಂದು ಆ ಸಭೆಯ ಕೊನೆಯಲ್ಲಿ ಮನವಿ ಮಾಡಿದ್ದೆ. ಜನರು ಈಗಾಗಲೇ ಸುಮಾರು 20 ಲಕ್ಷ ರೂ. ನೀಡಿದ್ದಾರೆ. ನಾಳೆ ಬಿಜೆಪಿ ವತಿಯಿಂದ ಭರತ್ ಭೂಷಣ್ ಅವರ ಮನೆಗೆ 10 ಲಕ್ಷದ ಒಂದು ರೂ. ಮತ್ತು ಮಂಜುನಾಥ್ ಅವರ ಮನೆಗೆ ಒಂದೆರಡು ದಿನದಲ್ಲಿ 10 ಲಕ್ಷದ ಒಂದು ರೂ. ಯನ್ನು ಕೊಡಲಿದ್ದೇವೆ ಎಂದು ಪ್ರಕಟಿಸಿದರು.
 

Share this Story:

Follow Webdunia kannada

ಮುಂದಿನ ಸುದ್ದಿ

ಮುಖ್ಯಮಂತ್ರಿಗಳೇ ಪೊಲೀಸರ ಮೇಲೆ ಮುಗಿಬಿದ್ದಿದ್ದಾರೆ, ನಾಚಿಕೆಯಾಗಲ್ವೇ: ಛಲವಾದಿ ನಾರಾಯಣಸ್ವಾಮಿ