Webdunia - Bharat's app for daily news and videos

Install App

ಹೀಗೇ ಬಿಟ್ರೆ ಧರ್ಮಸ್ಥಳ, ಶೃಂಗೇರಿ ದೇವಾಲಯನೂ ವಕ್ಫ್ ನದ್ದು ಅಂತಾರೆ: ತೇಜಸ್ವಿ ಸೂರ್ಯ ವಾಗ್ದಾಳಿ

Krishnaveni K
ಶನಿವಾರ, 2 ನವೆಂಬರ್ 2024 (15:52 IST)
ಬೆಂಗಳೂರು: ರಾಜ್ಯದಲ್ಲಿ ವಕ್ಫ್ ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಹೀಗೇ ಬಿಟ್ಟರೆ ಹಿಂದೂಗಳ ಪವಿತ್ರ ಧಾರ್ಮಿಕ ಕೇಂದ್ರವಾದ ಧರ್ಮಸ್ಥಳ, ಶೃಂಗೇರಿಯಂತಹ ಪ್ರಮುಖ ದೇವಾಲಯಗಳನ್ನೂ ವಕ್ಫ್ ನದ್ದು ಎನ್ನುತ್ತಾರೆ ಎಂದಿದ್ದಾರೆ.

ಹಲವು ಜಿಲ್ಲೆಗಳಲ್ಲಿ ರೈತರು, ಮಠ, ಮಂದಿರಗಳಿಗೂ ವಕ್ಫ್ ನೋಟಿಸ್ ನೀಡಿರುವ ಹಿನ್ನಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಇಂದು ಪತ್ರಿಕಾಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದರು. ಸಿಂಎ ಸೂಚನೆ ಮೇರೆಗೇ ಜಮೀರ್ ಅಹ್ಮದ್ ವಕ್ಫ್ ಅದಾಲತ್ ಗೆ ಕರೆದಿದ್ದಾರೆ. ವಕ್ಫ್ ಅದಾಲತ್ ಕಾಂಗ್ರೆಸ್ ಸರ್ಕಾರದ ಅಸಂವಿಧಾನಿಕ ಅನ್ವೇಷಣೆ. ಇದಕ್ಕೆ ಕಾನೂನಿನ ಮಾನ್ಯತೆ ಎಲ್ಲಿದೆ? ವಕ್ಫ್ ಅದಾಲತ್ ನಿಲ್ಲಿಸುವವರೆಗೂ ನಮ್ಮ ಹೋರಾಟ ನಿಲ್ಲಿಸಲ್ಲ ಎಂದು ಅವರು ಹೇಳಿದ್ದಾರೆ.

ಇಸ್ಲಾಂ ಹುಟ್ಟುವುದಕ್ಕೂ ಮುನ್ನ ಇರುವ ದೇವಸ್ಥಾನಗಳ ಆಸ್ತಿಯೂ ನಮ್ಮದು ಎನ್ನುತ್ತಿದ್ದಾರೆ. ಕಾಂಗ್ರೆಸ್ ನವರು ಉಚಿತ ಬಸ್, ಅಕ್ಕಿ ಕೊಡ್ತಾರೆ ಎಂದು ಅವರಿಗೆ ವೋಟ್ ಹಾಕಿದರೆ ನಮ್ಮ ದೇವಸ್ಥಾನ, ಮನೆ ಮಠ ಎಲ್ಲಾ ತೆಗೆದುಕೊಂಡು ಸಾಬರಿಗೆ ಕೊಟ್ಟು ಬಿಡುತ್ತಾರೆ. ಹೀಗೇ ಕಾಂಗ್ರೆಸ್ ಉಚಿತಕ್ಕೆ ಮರುಳಾಗಿ ವೋಟ್ ಹಾಕುತ್ತಿದ್ದರೆ ಮುಂದೆ ಧರ್ಮಸ್ಥಳ, ಶೃಂಗೇರಿಯೂ ಇರಲ್ಲ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರ ಈಗಾಗಲೇ ವಕ್ಫ್ ಕಾನೂನಿಗೆ ತಿದ್ದುಪಡಿ ತರಲು ಜೆಪಿಸಿ ಅನುಷ್ಠಾನಕ್ಕೆ ಬಂದಿದೆ. ಇದೇ ನವಂಬರ್ 6,7 ರಂದು ಜೆಪಿಸಿ ಅಧ್ಯಕ್ಷೆ ಜಗದಾಂಬಿಕಾ ಪಾಲ್ ರಾಜ್ಯಕ್ಕೆ ಆಗಮಿಸಲಿದ್ದಾರೆ. ಹುಬ್ಬಳ್ಳಿ, ಬೆಂಗಳೂರಿಗೆ ಬಂದು ರೈತರ ಅಹವಾಲುಗಳನ್ನು ಸ್ವೀಕರಿಸಲು ಮನವಿ ಮಾಡಿದ್ದೇನೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments