Webdunia - Bharat's app for daily news and videos

Install App

ತೇಜಸ್ವಿ ಸೂರ್ಯಗೆ ಬೆಂ. ದಕ್ಷಿಣ ಟಿಕೆಟ್: ಸಿಡಿದೆದ್ದ ಬಿಜೆಪಿ ಕಾರ್ಯಕರ್ತರಿಗೆ ತೇಜಸ್ವಿನಿ ಅನಂತಕುಮಾರ್ ಹೇಳಿದ್ದೇನು?

Webdunia
ಮಂಗಳವಾರ, 26 ಮಾರ್ಚ್ 2019 (09:53 IST)
ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಟಿಕೆಟ್ ಯಾರಿಗೆ ಎನ್ನುವುದು ಕೊನೆಗೂ ಫೈನಲ್ ಆಗಿದೆ. ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ತೇಜಸ್ವಿ ಸೂರ್ಯಗೆ ಬಿಜೆಪಿ ಟಿಕೆಟ್ ನೀಡಿರುವುದು ಕಾರ್ಯಕರ್ತರನ್ನು ಅಚ್ಚರಿಯ ಜತೆಗೆ ಅಸಮಾಧಾನಕ್ಕೆ ದೂಡಿದೆ.


ಇಲ್ಲಿ ಇದುವರೆಗೆ ದಿವಂಗತ ಅನಂತ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಗೇ ಟಿಕೆಟ್ ಸಿಗಬಹುದು ಎಂಬುದು ಬಿಜೆಪಿಯ ಕೆಲವು ಕಾರ್ಯಕರ್ತರ ನಿರೀಕ್ಷೆಯಾಗಿತ್ತು. ಆದರೆ ತೇಜಸ್ವಿನಿಗೆ ಟಿಕೆಟ್ ಕೊಡುವುದಕ್ಕೆ ಆರ್. ಅಶೋಕ್ ಸೇರಿದಂತೆ ಕೆಲವು ನಾಯಕರಿಗೆ ಅಸಮಾಧಾನವಿತ್ತು.

ಅಂತೂ ಕೊನೆಗೂ ಇಲ್ಲಿ ತೇಜಸ್ವಿನಿಗೆ ಟಿಕೆಟ್ ಸಿಗಲೇ ಇಲ್ಲ. ಅದರ ಬದಲು ತೇಜಸ್ವಿ ಸೂರ್ಯಗೆ ಟಿಕೆಟ್ ನೀಡಿರುವುದು ತೇಜಸ್ವಿನಿ, ಅನಂತಕುಮಾರ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿಯೇ ನೂರಾರು ಜನ ತೇಜಸ್ವಿನಿ ಮನೆ ಮುಂದೆ ಆಕ್ರೋಶ ವ್ಯಕ್ತಪಡಿಸಿದ್ದರು.

ಇದೆಲ್ಲಾ ಬೆಳವಣಿಗೆ ನಂತರ ತೇಜಸ್ವಿನಿ ಅನಂತಕುಮಾರ್ ತಮ್ಮ ಬೆಂಬಲಿಗರಿಗೆ ಟ್ವಿಟರ್ ನಲ್ಲಿ ಮನವಿಯೊಂದನ್ನು ಮಾಡಿದ್ದಾರೆ. ‘ಎಲ್ಲಾ ಬಿಜೆಪಿಯ ಕಾರ್ಯಕರ್ತರೇ, ಹಿತೈಷಿಗಳೇ, ನನಗೆ ಟಿಕೆಟ್ ಸಿಕ್ಕಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸುವ ಬದಲು ನಾವು ಇತರರಿಗಿಂತ ವ್ಯತ್ಯಸ್ಥ ಪಕ್ಷದವರು ಎಂದು ತೋರಿಸಿಕೊಳ್ಳೋಣ. ಅನಂತ್ ಯಾವತ್ತೂ ದೇಶ ಮೊದಲು, ಪಕ್ಷ ನಂತರ, ನಾನು ಕೊನೆಯವ ಎನ್ನುತ್ತಿದ್ದರು. ಅವರ ಸಿದ್ಧಾಂತದ ಹಾದಿಯಲ್ಲೇ ನಡೆಯುವವಳು ನಾನು. ವರಿಷ್ಠರು ಕೈಗೊಂಡ ನಿರ್ಧಾರವನ್ನು ಗೌರವಿಸೋಣ. ಮೋದಿಯನ್ನು ಮತ್ತೊಮ್ಮೆ ಗೆಲ್ಲಿಸೋಣ’ ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments