Webdunia - Bharat's app for daily news and videos

Install App

ಕೊಲೆಗಡುಕನಾಗಿದ್ರೆ ಯಾರ ಕೊಲೆ ಮಾಡಿದ್ದೀನಿ ಹೇಳಿ: ಈಶ್ವರಪ್ಪಗೆ ಸಚಿವ ರಮೇಶ್ ಕುಮಾರ್ ಸವಾಲ್

Webdunia
ಮಂಗಳವಾರ, 14 ನವೆಂಬರ್ 2017 (13:59 IST)
ಕೊಲೆಗಡುಕನಾಗಿದ್ರೆ ಯಾರ ಕೊಲೆ ಮಾಡಿದ್ದೀನಿ ಹೇಳಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವಿರುದ್ಧ ಆರೋಗ್ಯ ಖಾತೆ ಸಚಿವ ರಮೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ನಿನ್ನೆ ವಿಪಕ್ಷ ನಾಯಕ ಈಶ್ವರಪ್ಪ, ಸಚಿವ ರಮೇಶ್ ಕುಮಾರ್ ಕೊಲೆಗಡುಕ, ರಾಕ್ಷಸ ಅದಕ್ಕೆ ಮಕ್ಕಳಿಲ್ಲವೆಂದು ಟೀಕೆ ಮಾಡಿದ್ದರು.
 
ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವ ರಮೇಶ್ ಕುಮಾರ್, ಈಶ್ವರಪ್ಪಗೆ ಮರೆವು ಹೆಚ್ಚಾಗುತ್ತಿದೆ. ನನಗೆ ಇಬ್ಬರು ಮಕ್ಕಳಿದ್ದಾರೆ ಎನ್ನುವುದನ್ನು ಅವರು ಮರೆತಿದ್ದಾರೆ. ನಮ್ಮ ರಾಜಕೀಯದಲ್ಲಿ ಮಕ್ಕಳನ್ನು ಬೀದಿಗೆ ತರಬೇಡಿ ಎಂದು ಮನವಿ ಮಾಡಿದರು.
 
ಖಾಸಗಿ ವೈದ್ಯರನ್ನು ನಿಯಂತ್ರಣಕ್ಕೆ ತರಲು ಸರಕಾರ ಮಂಡಿಸುತ್ತಿರುವ ಮಸೂದೆ ಬಡವರ ಪರವಾಗಿದೆ. ಶ್ರೀಮಂತರ ಪರವಾಗಿಲ್ಲದಿರುವುದಕ್ಕೆ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ ಎಂದು ಲೇವಡಿ ಮಾಡಿದರು.
 
ನಾನು ಮಾಜಿ ಸಿಎಂ ದೇವರಾಜ ಅರಸರ ಗರಡಿಯಲ್ಲಿ ಬೆಳೆದಿದ್ದೇನೆ. ಅವರ ಕೆಲ ಆದರ್ಶಗಳನ್ನು ನಾನು ಇಲ್ಲಿಯವರೆಗೆ ಪಾಲಿಸಿಕೊಂಡು ಬಂದಿದ್ದೇನೆ ಎಂದು ಸಚಿವ ರಮೇಶ್ ಕುಮಾರ್ ಭಾವುಕರಾದ ಘಟನೆ ಸದನದಲ್ಲಿ ನಡೆಯುತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

ಮುಂದಿನ ಸುದ್ದಿ
Show comments