Webdunia - Bharat's app for daily news and videos

Install App

ದೇವಾಲಯದ ಬಳಿ ಮಹಿಳೆ ಶವ ಪತ್ತೆ: ನಿಧಿಗಾಗಿ ಕೊಲೆ ಶಂಕೆ

Webdunia
ಭಾನುವಾರ, 4 ಜುಲೈ 2021 (15:08 IST)
ತುಮಕೂರು, ಜು. 4- ಬೆಟ್ಟದ ಮೇಲಿನ ದೇವಾಲಯವೊಂದರ ಬಳಿ ಮಹಿಳೆ ಶವ ಪತ್ತೆಯಾಗಿದ್ದು, ನಿಧಿಗಾಗಿ ಮಹಿಳೆಯನ್ನು ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಕಳೆದ 15 ದಿನಗಳ ಹಿಂದೆಯೇ ಬೆಟ್ಟದ ಮೇಲಿನ ದೇವಾಲಯದ ಬಳಿ ಮಹಿಳೆ ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ. ಈ ಘಟನೆ 15 ದಿನಗಳ ಬಳಿಕ ತಡವಾಗಿ ಬೆಳಕಿಗೆ ಬಂದಿದೆ. 
ತಾಲ್ಲೂಕಿನ ಜಕ್ಕೇನಹಳ್ಳಿ ಬಳಿಯ ಎಂ. ಗೊಲ್ಲಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಬೆಟ್ಟದ ಮೇಲಿನ ಆಂಜನೇಯಸ್ವಾಮಿ ದೇವಾಲಯದ ಬಳಿ ಮಹಿಳೆಯ ಶವ ಪತ್ತೆಯಾಗಿದೆ. ಈ ದೇವಾಲಯದ ಒಳಭಾಗದಲ್ಲಿರುವ ಆಂಜನೇಯ ವಿಗ್ರಹದ ಮುಂಭಾಗದಲ್ಲಿ ನಿಧಿಗಾಗಿ ಅಗೆದು ಪೂಜೆ ಸಲ್ಲಿಸಿರುವ ದೃಶ್ಯ ಕಂಡು ಬಂದಿವೆ.
ಈ ದೇವಾಲಯದ ಬಳಿ ಕುರಿಗಾಹಿಗಳು ಕುರಿ ಮೇಯಿಸಲು ಹೋದ ಸಂದರ್ಭದಲ್ಲಿ ದುರ್ವಾಸನೆ ಬಂದಿದ್ದು, ದೇವಾಲಯದ ಅಕ್ಕಪಕ್ಕ ಎಲ್ಲ ಹುಡುಕಾಡಿ ನೋಡಿದಾಗ ಮಹಿಳೆಯ ಕೂದಲು ಕಂಡು ಬಂದಿದ್ದು, ಮೃತದೇಹ ಸಂಪೂರ್ಣ ಗುರುತು ಸಿಗದಂತಾಗಿದೆ. 
ತಕ್ಷಣ ಕುರಿಗಾಹಿಗಳು ದೇವಾಲಯದ ಬಳಿ ಶವ ಬಿದ್ದಿರುವ ವಿಷಯವನ್ನು ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಗಾಬರಿಗೊಂಡ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.  
ಈ ಸುದ್ದಿ ತಿಳಿದ ತುಮಕೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತಪ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. 
ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೆ ಈ ಮಹಿಳೆಯ ಸಾವಿನ ರಹಸ್ಯ ಬಹಿರಂಗಗೊಳ್ಳಬೇಕಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಶವ ಪರೀಕ್ಷೆಯ ನಂತರ ತಿಳಿಯಲಿದೆ.
ನಿಧಿಗಾಗಿ ನಡೆಯಿತೇ ಮಹಿಳೆ ಕೊಲೆ..?
ಎಂ. ಗೊಲ್ಲಹಳ್ಳಿ ಗ್ರಾಮದ ಬೆಟ್ಟದ ಮೇಲಿರುವ ಆಂಜನೇಯಸ್ವಾಮಿ ದೇವಾಲಯದ ಬಳಿ ಆಗಿಂದಾಗ್ಗೆ ನಿಧಿಗಾಗಿ ಕಿಡಿಗೇಡಿಗಳು ಅಗೆದು ದೇವಾಲಯ ಆವರಣವನ್ನು ಹಾಳು ಮಾಡುತ್ತಿದ್ದರು ಎನ್ನಲಾಗಿದೆ. 
ದೇವಾಲಯದ ಬೆಟ್ಟದ ಮೇಲಿರುವ ಕಾರಣ ಗ್ರಾಮಸ್ಥರು ಯಾರೂ ಆ ಕಡೆ ಸುಳಿಯುತ್ತಿರಲಿಲ್ಲ. ಹುಣ್ಣಿಮೆ, ಅಮಾವಾಸ್ಯೆಗಳಂದು ಈ ದೇವಾಲಯದಲ್ಲಿ ಪೂಜೆ ನಡೆಯುತ್ತಿತ್ತೆಂದು ಹೇಳಲಾಗಿದೆ. 
ಈ ದೇವಾಲಯದಲ್ಲಿ ಕಿಡಿಗೇಡಿಗಳು ನಿಧಿ ಆಸೆಯಿಂದ ಅಗೆದು ಮಹಿಳೆಯನ್ನು ಬಲಿ ಕೊಟ್ಟಿರಬಹುದು ಎಂಬ ಶಂಕೆಯನ್ನು ಕೆಲ ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಆದರೆ ಇದು ಸತ್ಯವೋ ಅಥವಾ ಕೇವಲ ಊಹಾಪೋಹವೋ ಎಂಬುದನ್ನು ಪೊಲೀಸರ ತನಿಖೆಯಿಂದಷ್ಟೆ ಖಚಿತಪಡಿಸಿಕೊಳ್ಳಬೇಕಿದೆ. 
ಘಟನೆಯ ಸುದ್ದಿ ತಿಳಿದ ಕೂಡಲೇ ಗ್ರಾಮಾಂತರ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಲಕ್ಷ್ಮಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖಾ ಕಾರ್ಯ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ತೆಹಲ್ಕಾ'ದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಶಿಕ್ಷೆಯಾದ ಪ್ರಕರಣ ಹಿನ್ನೆಲೆ ಇಲ್ಲಿದೆ

Video, ವಾಲಿಬಾಲ್ ಆಡುತ್ತಿರುವಾಗಲೇ ಹೃದಯಾಘಾತ, ಎಸ್ಸೆಸ್ಸೆಲ್ಸಿ ಬಾಲಕ‌ ಸ್ಥಳದಲ್ಲೇ ಸಾವು,

ಗಮನ‌ ಸೆಳೆದ ಬನ್ನೇರುಘಟ್ಟದ ಮರಿ‌ ಹಿಪ್ಪೋಗೆ ನಿಮ್ಮ‌ಇಚ್ಛೆಯ ಹೆಸರಿಡಬಹುದು, ಹಾಗಾದರೆ ನೀವೇನು‌ ಮಾಡಬೇಕು‌ ಗೊತ್ತಾ

ಮುಂದಿನ ಸುದ್ದಿ
Show comments