Webdunia - Bharat's app for daily news and videos

Install App

ಹತ್ತು ದಿನಗಳಿಂದ ಮಳೆಯಿಲ್ಲ, ಬೆಂಗಳೂರಿನಲ್ಲಿ ಮತ್ತೆ ಏರಿಕೆಯಾಗುತ್ತಿದೆ ತಾಪಮಾನ

Krishnaveni K
ಶನಿವಾರ, 1 ಜೂನ್ 2024 (10:12 IST)
ಬೆಂಗಳೂರು: ಮೇ ಮೊದಲ ವಾರದಲ್ಲೇ ಮಳೆ ಬಂದು ತಂಪಾಗಿದ್ದ ರಾಜ್ಯ ರಾಜಧಾನಿ
ಬೆಂಗಳೂರಿನಲ್ಲಿ ಇದೀಗ ಕಳೆದ ಹತ್ತು ದಿನಗಳಿಂದ ಮಳೆಯಿಲ್ಲ. ಮಳೆಯಿಲ್ಲದೇ ಮತ್ತೆ ತಾಪಮಾನ ಏರಿಕೆಯಾಗುತ್ತಿದೆ.

ಈ ಬಾರಿ ಬೆಂಗಳೂರಿನಲ್ಲಿ ತಾಪಮಾನ ದಾಖಲೆಯಮಟ್ಟಕ್ಕೇರಿತ್ತು. ಏಪ್ರಿಲ್ ಕೊನೆಯ ವಾರದಲ್ಲಿ ದಾಖಲೆಯ 40 ಡಿಗ್ರಿ ತಲುಪಿತ್ತು. ಕೂಲ್ ವಾತಾವರಣಕ್ಕೆ ಹೆಸರುವಾಸಿಯಾಗಿದ್ದ ಬೆಂಗಳೂರು ಇತ್ತೀಚೆಗಿನ ದಿನಗಳಲ್ಲಿ ಗರಿಷ್ಠ ತಾಪಮಾನಕ್ಕೆ ಸಾಕ್ಷಿಯಾಗಿತ್ತು.

ಆದರೆ ಮೇ ಮೊದಲ ವಾರದಲ್ಲಿ ಮಳೆ ಬಂದಿದ್ದರಿಂದ ವಾತಾವರಣ ಕೊಂಚ ತಂಪಾಗಿತ್ತು. ಆದರೆ ಈಗ ಮಳೆಯಿಲ್ಲದೇ 10 ದಿನಗಳಾಗಿವೆ. ಹೀಗಾಗಿ ಬೆಂಗಳೂರಿನಲ್ಲಿ ಮತ್ತೆ ತಾಪಮಾನ ಏರಿಕೆಯಾಗಿದ್ದು, ಸೆಖೆ, ಉರಿಬಿಸಿಲಿನ ವಾತಾವರಣ ಕಂಡುಬರುತ್ತಿದೆ.

ಇಂದು ಬೆಂಗಳೂರಿನಲ್ಲಿ ಸರಾಸರಿ ತಾಪಮಾನ 30 ಡಿಗ್ರಿಗಿಂತಲೂ ಅಧಿಕವಿದೆ. ಕಳೆದ ಒಂದು ವಾರದಿಂದ ಮಳೆಯೇ ಇಲ್ಲ. ಮುಂದಿನ ವಾರ ಮಳೆಯಾಗುವ ನಿರೀಕ್ಷೆಯಿದೆ. ಹವಾಮಾನ ಇಲಾಖೆ ವರದಿ ಪ್ರಕಾರ ಜೂನ್ 2 ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ. ಹೀಗಾದಲ್ಲಿ ರಾಜ್ಯದಕ್ಕೆ ಎರಡು ದಿನ ತಡವಾಗಿ ಮುಂಗಾರು ಪ್ರವೇಶವಾಗಬಹುದು. ಹೀಗಾಗಿ ಸೆಖೆಯಿಂದ ಕಂಗಾಲಾಗಿರುವ ಬೆಂಗಳೂರಿಗೆ ಮತ್ತೆ ಮುಂದಿನ ವಾರ ವರುಣ ತಂಪೆರಚುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments