Webdunia - Bharat's app for daily news and videos

Install App

ದೇವಾಲಯಗಳ ಆಸ್ತಿಯನ್ನು ಸಂರಕ್ಷಿಸಲು ಪ್ರಥಮಾದ್ಯತೆ ನೀಡಿ: ಸಚಿವ ಶ್ರೀನಿವಾಸ ಪೂಜಾರಿ

Webdunia
ಗುರುವಾರ, 1 ಜುಲೈ 2021 (15:52 IST)
ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಮುಜರಾಯಿ ದೇವಾಲಯಗಳ ಆಸ್ತಿಗಳನ್ನು ಯಾವುದೇ ಲೋಪಗಳಿಗೆ ಎಡೆಮಾಡಿಕೊಡದಂತೆ ಸಂರಕ್ಷಿಸುವುದು ಕಾರ್ಯನಿರ್ವಾಹಣ ಅಧಿಕಾರಿಗಳ ಜವಾಬ್ದಾರಿ ಎಂದು ಅಧಿಕಾರಿಗಳಿಗೆ ಹಿಂದುಳಿದ  ವರ್ಗಗಳ ಕಲ್ಯಾಣ, ಹಿಂದೂ ಧಾರ್ಮಿಕ ಮತ್ತು ಧರ್ಮರಾಯ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಲಾಖೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ದೇವಾಲಯಗಳ ಸರ್ವೇ ಕಾರ್ಯ ಕೈಗೊಂಡು, ಗಡಿ ಗುರುತಿಸಿ, ಬೇಲಿ ಹಾಕಿ ರಕ್ಷಿಸಲು ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಿದರು.
 
ಒತ್ತುವರಿ ಆಗಿರುವ ಹಲವಾರು ದೇವಾಲಯಗಳ ಜಾಗವನ್ನು ತೆರವುಗೊಳಿಸಿ, ಸ್ಥಳೀಯವಾಗಿ ಯಾವುದೇ ಅಡೆತಡೆಗಳು ಇದ್ದಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
 
ಈ ಕಾರ್ಯದಲ್ಲಿ ಯಾವುದೇ ಲೋಪ ಕಂಡುಬಂದಲ್ಲಿ ಅಂತಹ ಅಧಿಕಾರಿಯ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
 
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಪಿ. ಆರ್ ರಮೇಶ್, ರಮೇಶ್ ಗೌಡ, ರವಿಕುಮಾರ್ ಹಾಗೂ ಅ. ದೇವೇಗೌಡ ಅವರು, ಜಿಲ್ಲಾಧಿಕಾರಿಗಳಾದ ಜೆ ಮಂಜುನಾಥ್, ಇಲಾಖೆಯ ಆಯುಕ್ತರಾದ ರೋಹಿಣಿ ಸಿಂಧೂರಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಹಲಸಿನ ಹಣ್ಣು ತಿಂದು ವಾಹನ ಚಲಾಯಿಸುವಾಗ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಬಿದ್ರೆ ಕತೆ ಫಿನಿಶ್

ವಿಧಾನಸಭೆ ಗೆಲ್ಲಲು ನೀವೆಷ್ಟು ಅಕ್ರಮ ಮಾಡಿದ್ದೀರಿ: ರಾಹುಲ್ ಗಾಂಧಿಗೆ ಸಿಟಿ ರವಿ ತಿರುಗೇಟು

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಆರ್ ಎಸ್ಎಸ್ ವಿಷವಿದ್ದಂತೆ ಎಂದ ಮಲ್ಲಿಕಾರ್ಜುನ ಖರ್ಗೆ: ವಿಷ ಹಾಕಿದವರು ನೀವು ಎಂದ ವಿಜಯೇಂದ್ರ

ಮುಂದಿನ ಸುದ್ದಿ
Show comments