Publish Date: Sun, 09 Feb 2020 (18:28 IST)
Updated Date: Sun, 09 Feb 2020 (18:33 IST)
ಆ ದೇವಾಲಯದಲ್ಲಿ ಜಾತ್ರೆ ನಡೆಯೋದಕ್ಕೆ ಮೊದಲೇ ಹುಂಡಿಯಲ್ಲಿನ ಹಣ ಕಳ್ಳತನವಾಗಿರೋದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ವಿಜಯಪುರ ಜಿಲ್ಲೆಯ ನಿಡಗುಂದಿಯಲ್ಲಿರೋ ಶ್ರೀ ಮುದ್ದೇಶ್ವರ ದೇವಸ್ಥಾನದ ಹುಂಡಿಯಲ್ಲಿದ್ದ ಹಣವನ್ನು ಕಳ್ಳತನ ಮಾಡಲಾಗಿದೆ.
ಶ್ರೀ ಮುದ್ದೇಶ್ವರ ದೇವರ ಜಾತ್ರೆ ಮಾರ್ಚ್ ನಲ್ಲಿ ನಡೆಯಲಿದೆ. ಜಾತ್ರೆ ಸಂದರ್ಭದಲ್ಲಿ ಹುಂಡಿ ಒಡೆದು ಕಾಣಿಕೆ ಹಣ ಎಣಿಕೆ ಮಾಡಲಾಗುತ್ತಿತ್ತು.
ಆದರೆ ಜಾತ್ರೆಗೂ ಮೊದಲೇ ದುಷ್ಕರ್ಮಿಗಳು ಹುಂಡಿಯಲ್ಲಿನ ಹಣ ಕಳ್ಳತನ ಮಾಡಿದ್ದಾರೆ. ಕಳ್ಳರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.