ಪ್ರಧಾನಿ ಮೋದಿ ಆಗಮನಕ್ಕೆ ಕ್ಷಣಗಣನೆ: ಧರ್ಮಸ್ಥಳ-ಉಜಿರೆಯಲ್ಲಿ ಹೈ ಅಲರ್ಟ್

Webdunia
ಭಾನುವಾರ, 29 ಅಕ್ಟೋಬರ್ 2017 (09:10 IST)
ಧರ್ಮಸ್ಥಳ: ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ ಹಾಗೂ ಉಜಿರೆಯಲ್ಲಿ ಹೈ ಅಲರ್ಟ್ ಮಾಡಲಾಗಿದೆ.

ದೇವಾಲಯಕ್ಕೆ ಆಗಮಿಸಲಿರುವ ಮೋದಿಯವರು, ಮಂಜುನಾಥ ದೇವರಿಗೆ ರುದ್ರಾಭೀಷೇಕ ಮಾಡಿಸಲಿದ್ದಾರೆ. ನಂತರ ಅಣ್ಣಪ್ಪ ದೇವರ ದರ್ಶನ ಪಡೆಯಲಿದ್ದಾರೆ. ಇದಾದ ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರೊಂದಿಗೆ ಚರ್ಚೆ ನಡೆಸಿ ಅಲ್ಲಿಂದ ಉಜಿರೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಭದ್ರತಾ ದೃಷ್ಟಿಯಿಂದ ಸಿಬ್ಬಂದಿ ಬೆಳಗ್ಗೆಯಿಂದಲೇಧರ್ಮಸ್ಥಳ ಮಂಜುನಾಥ ದೇವಾಲಯದ ಸುತ್ತ ಭದ್ರತಾ ಕಾರ್ಯ ಚುರುಕುಗೊಳಿಸಿದ್ದಾರೆ. ಭಕ್ತರಿಗೆ ದೇವಾಲಯ ಪ್ರವೇಶ ನಿಷೇಧಿಸಿದೆ. ಈಗಾಗಲೇ ಬಾಂಬ್ ಪತ್ತೆದಳದಿಂದ ದೇವಾಲಯದ ಸುತ್ತ ತಪಾಸಣೆ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಧರ್ಮಸ್ಥಳ-ಉಜಿರೆ ರಸ್ತೆಯಲ್ಲಿ ಎಎನ್ಎಫ್ ನಿಂದ ಕೂಂಬಿಂಗ್ ನಡೆಸಿದೆ.

ಮೋದಿ ಆಗಮನ ಹಿನ್ನೆಲೆಯಲ್ಲಿ 2,500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನ ನೇಮಕ ಮಾಡಲಾಗಿದೆ. 10 ಎಸ್ಪಿ, 150 ಡಿವೈಎಸ್ಪಿ ದರ್ಜೆ ಅಧಿಕಾರಿಗಳು, ಎನ್ಎಸ್ ಜಿ, ಎಸ್ ಪಿಜಿ, ಎಎನ್ಎಫ್, ಬಾಂಬ್ ಪತ್ತೆದಳ ಭದ್ರತೆಗಾಗಿ ನಿಯೋಜನೆಗೊಂಡಿದೆ. ಅಲ್ಲದೆ ಧರ್ಮಸ್ಥಳ-ಉಜಿರೆ ರಸ್ತೆಯಲ್ಲಿ ಕಿಲೋಮೀಟರ್ ಗೆ ಇಬ್ಬರು ಪಿಎಸ್ಐ ಸೇರಿ 40 ಪೊಲೀಸ್ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ. ಈ ಮಾರ್ಗದಲ್ಲಿ ಮಾರ್ಗದಲ್ಲಿ ಸಾರ್ವಜನಿಕರಿಗೆ ಸಂಚಾರ ನಿಷೇಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments