ಪ್ರಧಾನಿ ಮೋದಿ ಆಗಮನಕ್ಕೆ ಕ್ಷಣಗಣನೆ: ಧರ್ಮಸ್ಥಳ-ಉಜಿರೆಯಲ್ಲಿ ಹೈ ಅಲರ್ಟ್

Webdunia
ಭಾನುವಾರ, 29 ಅಕ್ಟೋಬರ್ 2017 (09:10 IST)
ಧರ್ಮಸ್ಥಳ: ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ ಹಾಗೂ ಉಜಿರೆಯಲ್ಲಿ ಹೈ ಅಲರ್ಟ್ ಮಾಡಲಾಗಿದೆ.

ದೇವಾಲಯಕ್ಕೆ ಆಗಮಿಸಲಿರುವ ಮೋದಿಯವರು, ಮಂಜುನಾಥ ದೇವರಿಗೆ ರುದ್ರಾಭೀಷೇಕ ಮಾಡಿಸಲಿದ್ದಾರೆ. ನಂತರ ಅಣ್ಣಪ್ಪ ದೇವರ ದರ್ಶನ ಪಡೆಯಲಿದ್ದಾರೆ. ಇದಾದ ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರೊಂದಿಗೆ ಚರ್ಚೆ ನಡೆಸಿ ಅಲ್ಲಿಂದ ಉಜಿರೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಭದ್ರತಾ ದೃಷ್ಟಿಯಿಂದ ಸಿಬ್ಬಂದಿ ಬೆಳಗ್ಗೆಯಿಂದಲೇಧರ್ಮಸ್ಥಳ ಮಂಜುನಾಥ ದೇವಾಲಯದ ಸುತ್ತ ಭದ್ರತಾ ಕಾರ್ಯ ಚುರುಕುಗೊಳಿಸಿದ್ದಾರೆ. ಭಕ್ತರಿಗೆ ದೇವಾಲಯ ಪ್ರವೇಶ ನಿಷೇಧಿಸಿದೆ. ಈಗಾಗಲೇ ಬಾಂಬ್ ಪತ್ತೆದಳದಿಂದ ದೇವಾಲಯದ ಸುತ್ತ ತಪಾಸಣೆ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಧರ್ಮಸ್ಥಳ-ಉಜಿರೆ ರಸ್ತೆಯಲ್ಲಿ ಎಎನ್ಎಫ್ ನಿಂದ ಕೂಂಬಿಂಗ್ ನಡೆಸಿದೆ.

ಮೋದಿ ಆಗಮನ ಹಿನ್ನೆಲೆಯಲ್ಲಿ 2,500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನ ನೇಮಕ ಮಾಡಲಾಗಿದೆ. 10 ಎಸ್ಪಿ, 150 ಡಿವೈಎಸ್ಪಿ ದರ್ಜೆ ಅಧಿಕಾರಿಗಳು, ಎನ್ಎಸ್ ಜಿ, ಎಸ್ ಪಿಜಿ, ಎಎನ್ಎಫ್, ಬಾಂಬ್ ಪತ್ತೆದಳ ಭದ್ರತೆಗಾಗಿ ನಿಯೋಜನೆಗೊಂಡಿದೆ. ಅಲ್ಲದೆ ಧರ್ಮಸ್ಥಳ-ಉಜಿರೆ ರಸ್ತೆಯಲ್ಲಿ ಕಿಲೋಮೀಟರ್ ಗೆ ಇಬ್ಬರು ಪಿಎಸ್ಐ ಸೇರಿ 40 ಪೊಲೀಸ್ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ. ಈ ಮಾರ್ಗದಲ್ಲಿ ಮಾರ್ಗದಲ್ಲಿ ಸಾರ್ವಜನಿಕರಿಗೆ ಸಂಚಾರ ನಿಷೇಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ದಕ್ಷಿಣ ಸ್ಪೇನ್‌ನಲ್ಲಿ ಕಾಡ್ಗಿಚ್ಚಿಗೆ ಕನಿಷ್ಠ 12 ಮಂದಿ ಬಲಿ

ಮುಂದಿನ ಸುದ್ದಿ
Show comments