Webdunia - Bharat's app for daily news and videos

Install App

ಬಿಸಿಲಿನ ತಾಪಮಾನ ಹೆಚ್ಚಾದಂತೇ ಬೆಂಗಳೂರಿನಲ್ಲಿ ಎಳೆನೀರಿನ ಬೆಲೆಯೂ ಗಗನಕ್ಕೆ

Krishnaveni K
ಬುಧವಾರ, 26 ಫೆಬ್ರವರಿ 2025 (09:11 IST)
ಬೆಂಗಳೂರು: ರಾಜ್ಯದಲ್ಲಿ ಈಗ ಬಿಸಿಲಿನ ಝಳ ಹೆಚ್ಚಾಗಿದ್ದು, ಬೆಂಗಳೂರಿನಲ್ಲೂ ಬೇಸಿಗೆಕಾಲದ ಧಗೆ ಶುರುವಾಗಿದೆ. ತಾಪಮಾನ ಹೆಚ್ಚಳವಾಗುತ್ತಿದ್ದಂತೇ ಬೆಂಗಳೂರಿನಲ್ಲಿ ಎಳೆನೀರಿನ ಬೆಲೆಯೂ ಗಗನಕ್ಕೇರಿದೆ.

ಬೇಸಿಗೆಕಾಲದಲ್ಲಿ ಎಳೆನೀರು, ಕಲ್ಲಂಗಡಿ ಹಣ್ಣಿನಂತಹ ವಸ್ತುಗಳಿಗೆ ಬೇಡಿಕೆ ಹೆಚ್ಚು. ಬಾಡಿ ಹೀಟ್ ಆಗದಂತೆ ಎಳೆನೀರು ಸೇವನೆ ಮಾಡುವವರ ಸಂಖ್ಯೆ ಹೆಚ್ಚು. ಆದರೆ ಈಗ ರಾಜ್ಯ ರಾಜಧಾನಿಯಲ್ಲಿ ಎಳೆ ನೀರು ಬೆಲೆ ಕೇಳುವಂತೆಯೇ ಇಲ್ಲ.

ಒಂದೆಡೆ ಕಾಯಿ ಬರುವುದು ಕಡಿಮೆಯಾಗಿದ್ದರೆ ಇನ್ನೊಂದೆಡೆ ಬೇಡಿಕೆಯೂ ಹೆಚ್ಚಾಗಿದೆ. ಪರಿಣಾಮ ಉತ್ತಮ ಗುಣಮಟ್ಟದ ಎಳೆನೀರಿನ ಬೆಲೆ 60-70 ರೂ.ಗೆ ತಲುಪಿದೆ. ಕೆಲವೇ ದಿನಗಳ ಹಿಂದೆ 45-50 ರೂ. ಇದ್ದ ಎಳೆನೀರು ಈಗ ಏಕಾಏಕಿ 15-20 ರೂ.ಗೆ ಏರಿಕೆಯಾಗಿದೆ.

ವ್ಯಾಪಾರ ಹೆಚ್ಚಾಗಿದೆ ಆದರೆ ಅದಕ್ಕೆ ತಕ್ಕಷ್ಟು ಕಾಯಿ ಬರುತ್ತಿಲ್ಲ ಎನ್ನುತ್ತಿದ್ದಾರೆ ವ್ಯಾಪಾರಿಗಳು. ಇತ್ತೀಚೆಗೆ ತೆಂಗಿನಕಾಯಿ ಬೆಲೆಯೂ ಹೆಚ್ಚಾಗಿದ್ದನ್ನು ನೀವು ಗಮನಿಸಿರಬಹುದು. ಗುಣಮಟ್ಟದ ತೆಂಗಿನ ಕಾಯಿ ಬರದೇ ಇರುವುದು ಇದಕ್ಕೆ ಕಾರಣವಾಗಿದೆ. ಇದೀಗ ಎಳೆನೀರಿನ ಬೆಲೆಯೂ ಗಗನಕ್ಕೇರಿದೆ.

ಕೆಲವೊಂದು ಕಡೆ ಸಾಧಾರಣ ಗುಣಮಟ್ಟದ ಕಡಿಮೆ ನೀರು ಇರುವ ಎಳೆನೀರು 35-40 ರೂ.ಗೆ ಮಾರಾಟವಾಗುತ್ತಿದೆ. ಆದರೆ ಇದರಲ್ಲಿ ಹೆಚ್ಚು ನೀರು ಇರಲ್ಲ. ಚೆನ್ನಾಗಿ ನೀರು ಇರುವ ಕಾಯಿ ಬೇಕೆಂದರೆ 60 ರೂ.ಗಿಂತ ಕಮ್ಮಿಯಿಲ್ಲ ಎನ್ನುವುದು ಗ್ರಾಹಕರ ಅಳಲು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments