Webdunia - Bharat's app for daily news and videos

Install App

ಹಾಸ್ಯ ನಟ ಟೆನ್ನಿಸ್ ಕೃಷ್ಣ ರಾಜಕೀಯಕ್ಕೆ ಎಂಟ್ರಿ..!!!

Webdunia
ಗುರುವಾರ, 4 ಆಗಸ್ಟ್ 2022 (15:31 IST)
ದೇಶದ ರಾಜಕೀಯದಲ್ಲಿ ಬದಲಾವಣೆ ತರುವ ಪ್ರಯತ್ನದಲ್ಲಿ ಆಮ್‌ ಆದ್ಮಿ ಪಕ್ಷದ ಯಶಸ್ಸನ್ನು ಮೆಚ್ಚಿ ಕನ್ನಡದ ಖ್ಯಾತ ಹಾಸ್ಯನಟ ಟೆನ್ನಿಸ್‌ ಕೃಷ್ಣ ಪಕ್ಷಕ್ಕೆ ಗುರುವಾರ ಸೇರ್ಪಡೆಯಾದರು.
 
ಬೆಂಗಳೂರಿನ ಹೊಟೇಲ್‌ ಪರಾಗ್‌ನಲ್ಲಿ ನಡೆದ ಸಮಾರಂಭದಲ್ಲಿ ಎಎಪಿ ಪಕ್ಷದ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರು ಕೃಷ್ಣರವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
 
ಎಎಪಿ ಸೇರ್ಪಡೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಟೆನ್ನಿಸ್‌ ಕೃಷ್ಣ, "ದೇಶದ ರಾಜಕೀಯದಲ್ಲಿ ಬದಲಾವಣೆ ತರುವ ಪ್ರಯತ್ನದಲ್ಲಿ ಆಮ್‌ ಆದ್ಮಿ ಪಾರ್ಟಿ ಯಶಸ್ವಿಯಾಗುತ್ತಿದೆ. ದೆಹಲಿಯಲ್ಲಿ ಶಿಕ್ಷಣ, ಆರೋಗ್ಯ, ಕ್ರೀಡೆ ಮುಂತಾದ ಕ್ಷೇತ್ರಗಳಲ್ಲಿ ಸಾಧಿಸಿ ತೋರಿಸಿರುವ ಎಎಪಿಯು ಈಗ ಪಂಜಾಬ್‌ನಲ್ಲೂ ಮೋಡಿ ಮಾಡುತ್ತಿದೆ" ಎಂದರು.
 
"ಭ್ರಷ್ಟ ಪಕ್ಷಗಳನ್ನು ಬದಿಗೊತ್ತಿ ದೇಶವನ್ನು ಕಾಪಾಡಲು ಎಎಪಿಯಿಂದ ಮಾತ್ರ ಸಾಧ್ಯ. ಸಾಮಾನ್ಯ ಜನರ ಬಗ್ಗೆ ಅಪಾರ ಕಾಳಜಿಯುಳ್ಳ ಆಮ್‌ ಆದ್ಮಿ ಪಾರ್ಟಿಯ ಮೂಲಕ ರಾಜಕೀಯ ಪ್ರವೇಶಿಸುತ್ತಿರುವುದಕ್ಕೆ ಹೆಮ್ಮೆಯಾಗುತ್ತಿದೆ. ಎಎಪಿಯನ್ನು ಬಳಸಿಕೊಂಡು ದೇಶದ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯ ಪ್ರವೇಶಿಸಬೇಕು" ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments