Webdunia - Bharat's app for daily news and videos

Install App

ಹಿಜಬ್ ಕೇಸರಿ ಶಾಲು ವಿವಾದ

Webdunia
ಗುರುವಾರ, 27 ಜನವರಿ 2022 (15:06 IST)
ಕೆಲ ಕಾಲೇಜುಗಳಲ್ಲಿ ಹಿಜಾಬ್ ವಿವಾದ ಭಾರಿ ಚರ್ಚೆಗೆ ಕಾರಣವಾಗಿದ್ದು, ಹಿಜಾಬ್ ಹಾಕಿಕೊಂಡು ಮುಸ್ಲಿಂ ವಿದ್ಯಾರ್ಥಿನಿಯರು ತರಗತಿಗಳಿಗೆ ಆಗಮಿಸುತ್ತಿರುವುದು ಆಕ್ಷೇಪಕ್ಕೆ ಕಾರಣವಾಗಿದೆ.
 
ಉಡುಪಿಯ ಪದವಿಪೂರ್ವ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕ್ಲಾಸಿಗೆ ಬರುತ್ತಿರುವುದು ಸದ್ಯ ವಿವಾದಕ್ಕೆ ಕಾರಣವಾಗಿದೆ.
ಈ ಹಿಂದೆ ಹಿಜಾಬ್ ಧರಿಸಿ ಬಂದರೂ ತರಗತಿಗಳಲ್ಲಿ ಹಿಜಾಬ್ ತೆಗೆದಿರಿಸಿ ಪಾಠ ಕೇಳುತ್ತಿದ್ದರು. ಆದರೆ ಇತ್ತೀಚೆಗೆ ವಿದ್ಯಾರ್ಥಿನಿಯರು ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.
 
ಈ ನಡುವೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ಕೊಟ್ಟರೆ ಹಿಂದೂ ವಿದ್ಯಾರ್ಥಿನಿಯರಿಗೆ ಕೇಸರಿ ಶಾಲು ಧರಿಸಲು ಅವಕಾಶ ನೀಡಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ. ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾಲೇಜು ಆಡಳಿತ ಮಂಡಳಿ ಸದ್ಯಕ್ಕೆ ಆನ್ ಲೈನ್ ಕ್ಲಾಸ್ ಮುಂದುವರೆಸಲು ತೀರ್ಮಾನಿಸಿದೆ.
 
ಚಿಕ್ಕಮಗಳೂರಿನ ಪದವಿ ಕಾಲೇಜಿನಲ್ಲಿ ಒಂದು ತಿಂಗಳ ಹಿಂದೆ ಇದೇ ಹಿಜಾಬ್ ವಿವಾದ ಭುಗಿಲೆದ್ದಿತ್ತು. ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರಲು ಆರಂಭಿಸಿದರೆ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬರಲು ಆರಂಭಸಿದ್ದರು. ಇದೀಗ ಉಡುಪಿ ಕಾಲೇಜಿನಲ್ಲಿ ಇದೇ ವಿವಾದ ಮುಂದುವರೆದಿದೆ.
 
ಕೆಲ ಕಾಲೇಜು ಆಡಳಿತ ಮಂಡಳಿ ಹಿಜಾಬ್ ಧರಿಸಲು ವಿರೋಧಿಸಿದರೆ, ಕೆಲ ಆಡಳಿತ ಮಂಡಳಿ ಮುಸ್ಲಿಂ ಸಮುದಾಯದ ಒತ್ತಡಕ್ಕೆ ಮಣಿದಿದೆ. ಈ ಹಿನ್ನೆಲೆಯಲ್ಲಿ ವಸ್ತ್ರಸಂಹಿತೆ ವಿಚಾರವಾಗಿ ಉನ್ನತ ಮಟ್ಟದ ಸಮಿತಿ ರಚನೆ ಮಾಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ. ವಿದ್ಯಾರ್ಥಿಗಳ ವಸ್ತ್ರಸಂಹಿತೆ ಆಯ್ಕೆ ರೀತಿ ಕಾಲೇಜು ಹಂತದಲ್ಲಿ ಅನಗತ್ಯ ಗೊಂದಲಕ್ಕೆ ಹಾಗೂ ಪ್ರಚೋದನೆಗೆ ಕಾರಣವಾಗಲಿದೆ. ಹೀಗಾಗಿ ಶಿಕ್ಷಣ ಇಲಾಖೆ ವಸ್ತ್ರ ಸಂಹಿತೆ ನಿಗದಿಪಡಿಸಲು ಚಿಂತನೆ ನಡೆಸಿದ್ದು, ಉನ್ನತ ಮಟ್ಟದ ಸಮಿತಿ ರಚಿಸಲು ಮುಂದಾಗಿದೆ. ಸಮಿತಿ ವರದಿ ಬಳಿಕ ವಸ್ತ್ರಸಂಹಿತೆ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಿದ್ದು, ಅಲ್ಲಿಯವರೆಗೂ ಯಥಾಸ್ಥಿತಿ ಪಾಲಿಸುವಂತೆ ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments