Webdunia - Bharat's app for daily news and videos

Install App

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧದ ಪದಬಳಕೆ ಲೈಂಗಿಕ ದೌರ್ಜನ್ಯಕ್ಕೆ ಸಮ: ಸಿಎಂ ಸಿದ್ದರಾಮಯ್ಯ

Webdunia
ಗುರುವಾರ, 19 ಡಿಸೆಂಬರ್ 2024 (17:19 IST)
Photo Courtesy X
ಬೆಂಗಳೂರು: ಸಚಿವೆ  ಲಕ್ಷ್ಮೀ ಹೆಬ್ಬಾಳ್ಕರ್  ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ ಸಭಾಪತಿಯವರಿಗೂ ಹಾಗೂ ಪೊಲೀಸ್ ಠಾಣೆಗೂ ದೂರು ಸಲ್ಲಿಸಿರುವ ಮಾಹಿತಿ ದೊರೆತಿದ್ದು,  ಪೊಲೀಸರು ಈ ಕ್ರಿಮಿನಲ್ ಅಪರಾಧ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅವರು ಇಂದು ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಿಟಿ ರವಿಯವರು ಅವಾಚ್ಯ ಪದ ಬಳಕೆಯನ್ನು ಅಲ್ಲಗಳೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಅವಾಚ್ಯ ಪದ ಬಳಸಿದ್ದಾರೆಂದು ಹಲವು ಸದಸ್ಯರು ಹೇಳುತ್ತಿದ್ದು, ತಾನು ವಿಧಾನಪರಿಷತ್ತಿನಲ್ಲಿ ಇರಲಿಲ್ಲ ಎಂದು ತಿಳಿಸಿದರು.


ಇಂತಹ ಪದಪ್ರಯೋಗದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮನನೊಂದಿದ್ದು, ಇಂತಹ ಪದಬಳಕೆ ಒಂದು ರೀತಿಯ ಲೈಂಗಿಕ ದೌರ್ಜನ್ಯವಾಗಿದೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಿ. ಟಿ.ರವಿ ಅವರು  ಆರೋಪವನ್ನು ಅಲ್ಲಗಳೆದಿರುವ  ಬಗ್ಗೆ ಪ್ರತಿಕ್ರಿಯೆ ನೀಡಿ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ