Webdunia - Bharat's app for daily news and videos

Install App

ಬೆಂ-ಮೈಸೂರು ಎಕ್ಸ್ಪ್ರೆಸ್ ಹೈವೇನಲ್ಲಿ ಭಯಾನಕ ಅಪಘಾತ!

Webdunia
ಗುರುವಾರ, 8 ಜೂನ್ 2023 (07:45 IST)
ಮಂಡ್ಯ : ಮೈಸೂರು ನಗರಕ್ಕೆ ಕೈಗಾರಿಕೆಗಳು ಬರಲಿ, ಸಾಂಸ್ಕೃತಿಕ ನಗರಿ ಬೆಳೆಯಲಿ. ಪ್ರತಿದಿನ ಬೆಂಗಳೂರು-ಮೈಸೂರು ಸಂಚರಿಸುವ ಜನರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಕೇಂದ್ರ ಸರ್ಕಾರ 9000 ಕೋಟಿ ವೆಚ್ಚದಲ್ಲಿ ಮೈ-ಬೆಂ ದಶಪಥ ಹೆದ್ದಾರಿ ನಿರ್ಮಾಣ ಮಾಡಲಾಗಿದೆ.
 
ಈ ಹೆದ್ದಾರಿ ಇದೀಗ ಡೆಡ್ಲಿ ಆಕ್ಸಿಡೆಂಟ್ ಪ್ಲೇಸ್ ಆಗ್ತಿದೆ. ಮಂಡ್ಯ ಜಿಲ್ಲೆ ವ್ಯಾಪ್ತಿಯಲ್ಲಿ ಕೇವಲ 5 ತಿಂಗಳಲ್ಲೆ 55 ಮಂದಿ ಅಪಘಾತದಲ್ಲಿ ಮೃತಪಟ್ಟಿರೋದು ಆತಂಕ ಮೂಡಿಸಿದೆ.

 
ಹೌದು. ಮೈ-ಬೆಂ ಟೆನ್ ಲೈನ್ ಹೈವೇ ಮಂಡ್ಯ ಜಿಲ್ಲೆ ವ್ಯಾಪ್ತಿಯಲ್ಲಿಯೇ ಹೆಚ್ಚು ಹಾದು ಹೋಗಿದೆ. ಬರೋಬ್ಬರಿ 55 ಕಿ.ಮೀಗೂ ಹೆಚ್ಚು ದಶಪಥ ಹೆದ್ದಾರಿ ಇದೆ. ಸದ್ಯ ದಶಪಥ ಹೆದ್ದಾರಿ ಕಾಮಗಾರಿ ಸಂಪೂರ್ಣ ಮುಗಿದಿದ್ದು, ವಾಹನ ಸವಾರರು ಖುಷಿಯಿಂದ ಪ್ರಯಾಣ ಬೆಳೆಸುತ್ತಿದ್ದಾರೆ.

ಮಂಡ್ಯ ಜಿಲ್ಲಾ ವ್ಯಾಪ್ತಿಯ ದಶಪಥ ಹೆದ್ದಾರಿಯಲ್ಲಿ ನಡೆದಿರುವ ಅಪಘಾತ ಪ್ರಕರಣ ಹಾಗೂ ಅದರಿಂದ ಮೃತಪಟ್ಟವರ ಸಂಖ್ಯೆ ನೋಡಿದರೆ ಜನರಲ್ಲಿ ಆತಂಕ ಮೂಡಿಸುತ್ತಿದೆ. ಜನವರಿ ತಿಂಗಳಿಂದ ಮೇ ತಿಂಗಳ ಅಂತ್ಯದ ವರೆಗೆ 570 ಅಪಘಾತ ಪ್ರಕರಣ ಸಂಭವಿಸಿದ್ದು, 55 ಮಂದಿ ಮೃತಪಟ್ಟರೇ, 52 ಮಂದಿಗೆ ತೀವ್ರ ಪೆಟ್ಟು ಬಿದ್ದಿದೆ. ಇನ್ನು 184 ಮಂದಿಗೆ ಕೈಕಾಲು ಮುರಿದಿದ್ದು, 279 ಜನರಿಗೆ ಅಪಘಾತದಲ್ಲಿ ಸಣ್ಣ ಪುಟ್ಟ ಗಾಯಗಳಾಗಿದ್ದು ಜನರಲ್ಲಿ ಆಘಾತ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments