Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್..!

Webdunia
ಶನಿವಾರ, 11 ಫೆಬ್ರವರಿ 2023 (19:05 IST)
ಅವನೊಬ್ಬ ಹೇಳಿಕೊಳ್ಳೋದಕ್ಕೆ ಸಾಫ್ಟ್ ವೇರ್ ಉದ್ಯೋಗಿ.. ಆದ್ರೆ ಮಾಡ್ತಾಯಿದ್ದದ್ದು ಮಾತ್ರ ದೇಶ ದ್ರೋಹದ ಕೆಲಸ‌‌.. ಈತನ ಚಲನವಲನ ವನ್ನು ಕರೆಕ್ಟ್ ಆಗಿ ವಾಚ್ ಮಾಡ್ತಾಯಿದ್ದ ತನಿಖಾ ಸಂಸ್ಥೆಗಳು ಇದೀಗ ಆತನನ್ನು ಬಲೆಗೆ ಬೀಳಿಸಿಕೊಂಡಿದ್ದಾರೆ.ಬೆಂಗಳೂರಿನ ಥಣಿಸಂದ್ರದಲ್ಲಿ ನಮ್ಮ ನಡುವೆಯೇ ಉಗ್ರನೊಬ್ಬ ಇದ್ದ ಅನ್ನೋ ವಿಚಾರವೇ ಜನರನ್ನು ಬೆಚ್ಚಿಬೀಳುವಂತೆ ಮಾಡಿತ್ತು.ಮ ಮುಖದಲ್ಲಿಯು ಆತಂಕ, ಗಾಬರಿ. ಎಲ್ಲಾರು ಸಹ ಆ ಒಂದು ಮನೆಯನ್ನೆ ನೋಡ್ತಾಯಿದ್ದಾರೆ.

 ಓರ್ವ ಶಂಕಿತ ಉಗ್ರ.. ಉತ್ತರ ಪ್ರದೇಶ ಮೂಲದ ಆರೀಫ್ ಅಲಿಯಾಸ್ ಮಹಮದ್ ಆರಿಫ್ ಕಳೆದ ಎರಡು‌ವರೆ ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ.. ಮಾನ್ಯತ ಟೆಕ್ ಪಾರ್ಕ್ ನಲ್ಲಿ ಸಾಫ್ಟ್ ವೇರ್ ಉದ್ಯೋಗಿಯಾಗಿ ಕೆಲಸ ಮಾಡ್ತಾಯಿದ್ದ.. ತಣಿಸಂದ್ರದ  ಮಂಜುನಾಥ್ ನಗರದಲ್ಲಿ ತನ್ನ ಹೆಂಡತಿ ಮತ್ತು ಇಬ್ಪರು ಮಕ್ಕಳ ಜೊತೆ ವಾಸವಿದ್ದ.. ಆದ್ರೆ ಈತನ ಟಾರ್ಗೆಟ್ ಬೇರೆಯೇ‌ ಇತ್ತು.. ಹೌದು.. ಐಎಸ್ ಡಿ ಹಾಗು ಕೇಂದ್ರ ಸಂಸ್ಥೆಗಳ ಕಾರ್ಯಾಚರಣೆ ನಡೆಸಿ ಇಂದು ಈತನ ಮನೆಗೆ ದಾಳಿ ಮಾಡಿದ್ದಾರೆ.. ಈ ಆರೀಫ್
ಟೆಲಿಗ್ರಾಮ್ ನಲ್ಲಿ ಆಲ್ ಖೈದಾ ಗ್ರೂಪ್ ಗಳಲ್ಲಿ ಸಕ್ರಿಯನಾಗಿದ್ದನಂತೆ.. ಇಷ್ಟೇ ಅಲ್ಲದೇ ಸಿರಿಯಾ ಮತ್ತು ಇರಾನ್ ಮೂಲಕ ತೆರಳಲು ಈ ಹಿಂದೆ ಯತ್ನಿಸಿದ್ದ ಆದ್ರೆ ಎರಡೂ ದೇಶಗಳಿಂದ ಒಪ್ಪಿಗೆ ಇಲ್ಲದ ಕಾರಣ  ಹೋಗಲು ಸಾದ್ಯವಾಗಿರಲಿಲ್ಲಾ.ಈಗ ಮಾರ್ಚ್ ನಲ್ಲಿ ಮತ್ತೆ ಇರಾನ್ ಮೂಲಕ ಸಿರಿಯಾ ಹಾಗು ಅಫ್ಘಾನ್ ಗೆ ತರಳಲು ಪ್ಲಾನ್ ಮಾಡಿ ಫ್ಲೈಟ್ ಟಿಕೆಟ್ ಕೂಡ ರೆಡಿಮಾಡಿಕೊಂಡಿದ್ದ.

ಈ ಹಿಂದೆ ಐಸಿಸ್  ಬಗ್ಗೆ  ಒಲವನ್ನು ಹೊಂದಿದ್ದ ಆರೀಫ್ ತದನಂತರದಲ್ಲಿ 
 ಆಫ್ಘಾನಿಸ್ತಾನದದಲ್ಲಿ ಆಲ್ ಖೈದಾ  ತಾಲಿಬಾನ್ ವಶಕ್ಕೆ ಪಡೆದ ನಂತರ ತನ್ನ ಬೆಂಬಲವನ್ನು ತಾಲಿಬಾನ್ ಗೆ ವಾಲಿಸಿದ್ದ‌..
ತಾಲಿಬಾನ್ ಪವರ್ ಫುಲ್ ಆಗಿದ್ದ ಬಳಿಕ ಈತನ ಒಲವು ಆಲ್ ಖೈದಾ ಮತ್ತು ತಾಲಿಬಾನ್ ಕಡೆಗೆ ಹೋಗಿತ್ತು., ಇದಕ್ಕೆ ಪೂರಕವಾಗಿ ಈ ಹಿಂದೆ ಟ್ವಿಟರ್ ನಲ್ಲಿ ಉಗ್ರ ಸಂಘಟನೆ ಪರವಾಗಿ ಫೇಕ್ ಅಕೌಂಟ್ ಕ್ರಿಯೇಟ್‌ ಮಾಡಿ ಅದರಲ್ಲಿ ಪೋಸ್ಟ್ ಮಾಡಿದ್ದ ಅಂತಲು ಸಹ ಹೇಳಲಾಗುತ್ತಿದೆ.. ಅದ್ರೆ  ಟ್ವಿಟರ್  ಈತನ ಫೇಕ್ ಅಕೌಂಟ್ ಗಳನ್ನು  ಬ್ಲಾಕ್ ಮಾಡಿತ್ತು, ಆಗಲೇ ಎಚ್ಚಿತ್ತುಕೊಂಡ ಈತ ಟ್ವಿಟರ್ ಯೂಸ್ ಮಾಡೋದನ್ನೆ ಬಿಟ್ಟಿದ್ದನಂತೆ.. ಇನ್ನು ಪಕ್ಕಾ ಪ್ಲ್ಯಾನ್ ಮಾಡಿಕೊಂಡಿದ್ದ ಈ ಆರೀಫ್ ಯಾವುದೇ ತನ್ನ ದಾಖಲಾತಿ ಕೊಡದೇ ಬರಿ ಅಗ್ರಿಮೆಂಟ್ ಮಾಡಿಕೊಂಡು ಮನೆಗೆ ಸೇರಿಕೊಂಡಿದ್ದ.. ಆದ್ರೆ ಮುಂದಿನ ತಿಂಗಳು ಅಫ್ಘಾನ್ ಗೆ ಹೋಗಬೇಕೆಂದು ಪ್ಲ್ಯಾನ್ ಮಾಡಿದ್ದ ಈತ ಮನೆ ಕಾಲಿ ಮಾಡ್ತೀವಿ ಅಂತ  ಓನರ್ ಜೊತೆ ಫೈನಲ್ ಸೆಟಲ್ ಮೆಂಟ್ ಮಾಡಿಕೊಂಡಿದ್ದ. ಕಳೆದ 2.5 ವರ್ಷಗಳಿಂದ‌ ವಾಸವಿದ್ದ‌ ಆರೀಫ್, ಈ ಹಿಂದೆ ಮನೆಗೆ ಬರಬೇಕಾದ್ರೆ  50 ಸಾವಿರ ಅಡ್ವಾನ್ಸ್ ಕೊಟ್ಟಿದ್ದಹೀಗಾಗಿ ಓನರ್ ನಿನ್ನೆ‌ ಪೇಯಿಂಟ್ ಖರ್ಚು ಎಲ್ಲಾ ಕಳೆದು 35 ಸಾವಿರ ಕೊಟ್ಟಿದ್ದರು‌‌, ಹೀಗಾಗಿ ನಾಳೆ 12 ನೇ ತಾರೀಖಿನಂದು ಮನೆ ಖಾಲಿ ಮಾಡ್ತೀವಿ ಅಂತ ಹೇಳಿದ್ದ ಎಂದು ತಿಳಿದು ಬಂದಿದೆ. ಇನ್ನು ಉಗ್ರನ ಬಂಧನ ಕುರಿತು ಗೃಹಸಚಿವ ಆರಗ ಜ್ಞಾನೇಂದ್ರ ಅಧಿಕಾರಿಗಳಿಗೆ ಅಭಿನಂದನೆ ಸೂಚಿಸಿದ್ದಾರೆ.

ಸದ್ಯ ಆರೀಫ್ ಮನೆಯಲ್ಲಿ ಸಿಕ್ಕಂತಹ ಮೊಬೈಲ್, ಲ್ಯಾಪ್ ಟಾಪ್, ಹಾರ್ಡ್ ಡಿಸ್ಕ್, ಕೆಲ ದಾಖಲಾತಿಗಳು,  ಸೇರಿದಂತೆ ಅನೇಕ ಎವಿಡೆನ್ಸ್ ಗಳನ್ನು ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.. ಇದೀಗ ಆರೀಫ್ ನನ್ನು ಸಹ‌ ವಶಕ್ಕೆ ಪಡೆದಿದ್ದು ಇದೀಗ ದೊಮ್ಮಲೂರಿನಲ್ಲಿರುವ ಎನ್.ಐ.ಎ ಕಚೇರಿಗೆ ಕರೆದೋಯ್ದು ತನಿಖೆಯನ್ನು ಸಹ ಮುಂದುವರಿಸಿದ್ದಾರೆ.. ಒಟ್ಟಿನಲ್ಲಿ ಇದೇ ದೇಶದ ಅನ್ನ ತಿಂದು ಇದೇ ದೇಶಕ್ಕೆ ದ್ರೋಹ ಬಗೆಯೋದು ಅದೆಷ್ಟು ಸರಿ‌ ಅನ್ನೋದೆ ಪ್ರಶ್ನೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments