ಭಯೋತ್ಪಾದನೆಯನ್ನು ಧರ್ಮಕ್ಕೆ ಹೋಲಿಸಬಾರದು-ಅಮಿತ್ ಶಾ

Webdunia
ಶನಿವಾರ, 19 ನವೆಂಬರ್ 2022 (19:49 IST)
ಭಯೋತ್ಪಾದನೆಯನ್ನು ಅಥವಾ ಭಯೋತ್ಪಾದನೆಯ ಬೆದರಿಕೆಗಳನ್ನು ಯಾವುದೇ ಧರ್ಮ ಅಥವಾ ಗುಂಪಿಗೆ ಹೋಲಿಕೆ ಮಾಡಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಲಹೆ ನೀಡಿದ್ದಾರೆ. ದೆಹಲಿಯ ಗೃಹ ಸಚಿವಾಲಯ ಆಯೋಜಿಸಿದ್ದ ಭಯೋತ್ಪಾದನಾ ಚಟುವಟಿಕೆಗಳ ನಿಗ್ರಹ ಕುರಿತ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು. ಭಯೋತ್ಪಾದನೆ ಚಟುವಟಿಕೆಗಳಿಗೆ ಹಣಕಾಸು ಒದಗಿಸುವುದು ಭಯೋತ್ಪಾದನೆಗಿಂತಲೂ ಅಪಾಯಕಾರಿ. ಹಾಗಾಗಿ ಭಯೋತ್ಪಾದನಾ ಚಟುವಟಿಕೆಗಳನ್ನು ಯಾವುದೇ ಧರ್ಮ, ರಾಷ್ಟ್ರೀಯತೆ ಅಥವಾ ಜನಾಂಗದ ಗುಂಪಿಗೆ ಹೋಲಿಸಬಾರದು ಎಂದು ಹೇಳಿದ್ದಾರೆ. ಭಯೋತ್ಪಾದನೆಗೆ ಹಣಕಾಸು ಒದಗಿಸುವುದು ವಿಶ್ವದ ರಾಷ್ಟ್ರಗಳ ಆರ್ಥಿಕತೆಯನ್ನು ದುರ್ಬಲಗೊಳಿಸುತ್ತದೆ. ಅಲ್ಲದೆ, ಹಿಂಸಾಚಾರ ನಡೆಸಲು, ಯುವಸಮೂಹವನ್ನು ಭಯೋತ್ಪಾದನಾ ಚಟುವಟಿಕೆಗಳಿಗೆ ಬಳಸಿಕೊಳ್ಳೋದು ಹಾಗೂ ತಮ್ಮ ಆರ್ಥಿಕ ಸಂಪನ್ಮೂಲಗಳನ್ನು ಹೆಚ್ಚಿಸಿಕೊಳ್ಳಲು ಭಯೋತ್ಪಾದಕರು ನಿರಂತರವಾಗಿ ಹೊಸ – ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ತಮ್ಮ ಗುರುತನ್ನು ಮರೆಮಾಚಲು ಡಾರ್ಕ್‌ನೆಟ್‌ ಬಳಸುತ್ತಿದ್ದಾರೆ ಎಂದು ಒತ್ತಿ ಹೇಳಿದ್ದಾರೆ. ಭಯೋತ್ಪಾದನಾ ಬೆದರಿಕೆಗಳು ವಿಶ್ವದ ಶಾಂತಿಗೆ ಭಂಗ ತರುತ್ತವೆ ಅನ್ನೋದ್ರಲ್ಲಿ ಯಾವುದೇ ಸಂದೇಹವಿಲ್ಲ. ಇಂತಹ ಚಟುವಟಿಕೆಗಳ ನಿಧಿಗೆ ಹಣಕಾಸು ಹರಿದು ಬರೋದ್ರಿಂದಲೇ ಚಟುವಟಿಕೆ ಪೋಷಣೆಯಾಗುತ್ತಿದೆ. ಈ ಬೆಳವಣಿಗೆಯು ವಿಶ್ವದ ರಾಷ್ಟ್ರಗಳ ಆರ್ಥಿಕತೆಯನ್ನು ದುರ್ಬಲಗೊಳಿಸುತ್ತದೆ ಎಂದು ಎಚ್ಚರಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chikkaballapura: ಬಟ್ಟೆ ಅಂಗಡಿಗೆ ಬಂದಿದ್ದಾಗ ಬಾಲ್ಕನಿಯಿಂದ ಬಿದ್ದ ಮಗು: ಭೀಕರ ವಿಡಿಯೋ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದರೋಡೆಗೆ ಬಂದವರನ್ನು ಈ ಇಬ್ಬರು ಹೆಣ್ಣು ಮಕ್ಕಳು ಹಿಮ್ಮೆಟ್ಟಿಸಿದ್ದು ಹೇಗೆ ನೋಡಿ Video

Video: ನಮ್ಮ ಮೆಟ್ರೋವನ್ನು ಬೆಡ್ ರೂಂ ಮಾಡಿಕೊಂಡ ಯುವ ಜೋಡಿ: ಅಸಭ್ಯ ವರ್ತನೆ ವಿಡಿಯೋ ವೈರಲ್

ಟೌನ್‍ಶಿಪ್ ಬಗ್ಗೆ ತಲೆ ಕೆಡಿಸಿಕೊಳ್ಳದೇ ಉತ್ತರ ಕರ್ನಾಟಕದ ಅಭಿವೃದ್ಧಿ ಕಡೆ ಗಮನ ಕೊಡಿ: ವಿಜಯೇಂದ್ರ

ಮುಂದಿನ ಸುದ್ದಿ
Show comments