Webdunia - Bharat's app for daily news and videos

Install App

ಭಯೋತ್ಪಾದನೆಯನ್ನು ಧರ್ಮಕ್ಕೆ ಹೋಲಿಸಬಾರದು-ಅಮಿತ್ ಶಾ

Webdunia
ಶನಿವಾರ, 19 ನವೆಂಬರ್ 2022 (19:49 IST)
ಭಯೋತ್ಪಾದನೆಯನ್ನು ಅಥವಾ ಭಯೋತ್ಪಾದನೆಯ ಬೆದರಿಕೆಗಳನ್ನು ಯಾವುದೇ ಧರ್ಮ ಅಥವಾ ಗುಂಪಿಗೆ ಹೋಲಿಕೆ ಮಾಡಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಲಹೆ ನೀಡಿದ್ದಾರೆ. ದೆಹಲಿಯ ಗೃಹ ಸಚಿವಾಲಯ ಆಯೋಜಿಸಿದ್ದ ಭಯೋತ್ಪಾದನಾ ಚಟುವಟಿಕೆಗಳ ನಿಗ್ರಹ ಕುರಿತ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು. ಭಯೋತ್ಪಾದನೆ ಚಟುವಟಿಕೆಗಳಿಗೆ ಹಣಕಾಸು ಒದಗಿಸುವುದು ಭಯೋತ್ಪಾದನೆಗಿಂತಲೂ ಅಪಾಯಕಾರಿ. ಹಾಗಾಗಿ ಭಯೋತ್ಪಾದನಾ ಚಟುವಟಿಕೆಗಳನ್ನು ಯಾವುದೇ ಧರ್ಮ, ರಾಷ್ಟ್ರೀಯತೆ ಅಥವಾ ಜನಾಂಗದ ಗುಂಪಿಗೆ ಹೋಲಿಸಬಾರದು ಎಂದು ಹೇಳಿದ್ದಾರೆ. ಭಯೋತ್ಪಾದನೆಗೆ ಹಣಕಾಸು ಒದಗಿಸುವುದು ವಿಶ್ವದ ರಾಷ್ಟ್ರಗಳ ಆರ್ಥಿಕತೆಯನ್ನು ದುರ್ಬಲಗೊಳಿಸುತ್ತದೆ. ಅಲ್ಲದೆ, ಹಿಂಸಾಚಾರ ನಡೆಸಲು, ಯುವಸಮೂಹವನ್ನು ಭಯೋತ್ಪಾದನಾ ಚಟುವಟಿಕೆಗಳಿಗೆ ಬಳಸಿಕೊಳ್ಳೋದು ಹಾಗೂ ತಮ್ಮ ಆರ್ಥಿಕ ಸಂಪನ್ಮೂಲಗಳನ್ನು ಹೆಚ್ಚಿಸಿಕೊಳ್ಳಲು ಭಯೋತ್ಪಾದಕರು ನಿರಂತರವಾಗಿ ಹೊಸ – ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ತಮ್ಮ ಗುರುತನ್ನು ಮರೆಮಾಚಲು ಡಾರ್ಕ್‌ನೆಟ್‌ ಬಳಸುತ್ತಿದ್ದಾರೆ ಎಂದು ಒತ್ತಿ ಹೇಳಿದ್ದಾರೆ. ಭಯೋತ್ಪಾದನಾ ಬೆದರಿಕೆಗಳು ವಿಶ್ವದ ಶಾಂತಿಗೆ ಭಂಗ ತರುತ್ತವೆ ಅನ್ನೋದ್ರಲ್ಲಿ ಯಾವುದೇ ಸಂದೇಹವಿಲ್ಲ. ಇಂತಹ ಚಟುವಟಿಕೆಗಳ ನಿಧಿಗೆ ಹಣಕಾಸು ಹರಿದು ಬರೋದ್ರಿಂದಲೇ ಚಟುವಟಿಕೆ ಪೋಷಣೆಯಾಗುತ್ತಿದೆ. ಈ ಬೆಳವಣಿಗೆಯು ವಿಶ್ವದ ರಾಷ್ಟ್ರಗಳ ಆರ್ಥಿಕತೆಯನ್ನು ದುರ್ಬಲಗೊಳಿಸುತ್ತದೆ ಎಂದು ಎಚ್ಚರಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments