ಇರಾನ್​ನ ಷಿಯಾ ಮಸೀದಿ ಮೇಲೆ ಉಗ್ರರ ದಾಳಿ

Webdunia
ಗುರುವಾರ, 27 ಅಕ್ಟೋಬರ್ 2022 (19:21 IST)
ಇರಾನ್​ನಲ್ಲಿ ಹಿಜಾಬ್ ವಿರೋಧಿ ಹೋರಾಟಗಳು ಹಿಂಸಾತ್ಮಕ ಸ್ವರೂಪ ಪಡೆದುಕೊಳ್ಳುತ್ತಿರುವ ನಡುವೆಯೇ ಷಿಯಾ ಮುಸ್ಲಿಂ ಸಮುದಾಯದ ಪ್ರಮುಖ ಯಾತ್ರಾ ಸ್ಥಳ ‘ಷಾ ಚೆರಾಗ್’ ಮಸೀದಿಯ ಮೇಲೆ ಭೀಕರ ಭಯೋತ್ಪಾದನಾ ದಾಳಿ ನಡೆದಿದೆ. ಅಪರಿಚಿತ ಬಂದೂಕುಧಾರಿ ಅಡ್ಡಾದಿಡ್ಡಿ ಗುಂಡು ಹಾರಿಸಿದಾಗ 15 ಮಂದಿ ಸ್ಥಳದಲ್ಲಿಯೇ ಮೃತಪಟ್ಟರು. ‘ಷಾ ಚೆರಾಗ್’ ಮಸೀದಿಯಲ್ಲಿ ಷಿಯಾ ಸಮುದಾಯದ 8ನೇ ಧರ್ಮಗುರು ಇಮಾಮ್ ರೆಜಾ ಅವರ ಸಮಾಧಿ ಇದೆ. ಇದು ದಕ್ಷಿಣ ಇರಾನ್​ನ ಪವಿತ್ರ ಯಾತ್ರಾಸ್ಥಳ ಎಂದು ಹೆಸರುವಾಸಿಯಾಗಿದೆ. ಈ ದಾಳಿಯಲ್ಲಿ 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದೆ. ಮಸೀದಿಗೆ ನುಗ್ಗಿದ ಅಪರಿಚಿತರು ಪ್ರಾರ್ಥನೆ ಸಲ್ಲಿಸುತ್ತಿದ್ದವರ ಮೇಲೆ ಏಕಾಏಕಿ ಅಡ್ಡಾದಿಡ್ಡಿ ಗುಂಡು ಹಾರಿಸಲು ಆರಂಭಿಸಿದರು. ಕೆಲ ಹೊತ್ತಿನ ನಂತರ ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿ ಸಂಘಟನೆಯ ಭಾಗವಾಗಿ ಗುರುತಿಸಿಕೊಂಡಿರುವ ಗುಂಪೊಂದು ದಾಳಿಯ ಹೊಣೆ ಹೊತ್ತುಕೊಂಡಿತು. ಭಯೋತ್ಪಾದಕ ದಾಳಿಯ ಕುರಿತು ಪ್ರತಿಕ್ರಿಯಿಸಿರುವ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ದಾಳಿ ಮಾಡಿದವರು ಯಾರೇ ಆಗಿದ್ದರೂ ಬಿಡುವುದಿಲ್ಲ. ಅವರನ್ನು ಪತ್ತೆ ಹಚ್ಚಿ ಸೇಡು ತೀರಿಸಿಕೊಳ್ಳುತ್ತೇವೆ ಎಂದು ಎಚ್ಚರಿಸಿದ್ದಾರೆ. ದೇಶವನ್ನು ವಿಭಜಿಸಲು ಯತ್ನಿಸುತ್ತಿರುವ ಇರಾನ್ ವಿರೋಧಿಗಳನ್ನು ಸಹಿಸಲು ಆಗುವುದಿಲ್ಲ ಎಂದು ಕಟುವಾಗಿ ನುಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಕ್ವಾರಿ ದುರಂತದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಗಂಭೀರ ಆರೋಪ ಮಾಡಿದ ಆರ್ ಅಶೋಕ್

ಕೇತನ್ ಅಗರ್ವಾಲ್ ಕೇಸ್ ಬೆನ್ನಲ್ಲೇ ರಾಜ ರಘುವಂಶಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಇಷ್ಟೆಲ್ಲಾ ಮಾಡಿದ್ರೂ ಕೇತನ್ ಅಗರ್ವಾಲ್ ಹತ್ಯೆ ಮಾಡಿದ್ದಕ್ಕೆ ಸಿಯಾ ಗೋಯಲ್ ಗೆ ಶಿಕ್ಷೆಯಾಗೋದು ಅಷ್ಟು ಸುಲಭವಲ್ಲ

ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜೊತೆ ಸಮಾಲೋಚನೆ ಮಾಡಿ: ಬಿ.ವೈ.ವಿಜಯೇಂದ್ರ

Video ಹೆತ್ತ ತಾಯಿಗೆ ಹೀಗೆ ಮಾಡೋದಾ.. ಹೆತ್ತ ಮಗನ ವರ್ತನೆಗೆ ಛೀಮಾರಿ ಹಾಕಿದ ಜನ

ಮುಂದಿನ ಸುದ್ದಿ
Show comments