Webdunia - Bharat's app for daily news and videos

Install App

ಸಚಿವರ ವರದಿ ಆಧರಿಸಿ ಪಠ್ಯ ಪರಿಷ್ಕರಣೆ ಕ್ರಮ: ಮುಖ್ಯಮಂತ್ರಿ ಬೊಮ್ಮಾಯಿ

Webdunia
ಬುಧವಾರ, 1 ಜೂನ್ 2022 (18:46 IST)
ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಿಂದ ಲೂ ಪರಿಶೀಲಿಸಿ ಶಿಕ್ಷಣ ಸಚಿವರು ವರದಿ ನೀಡಲಿದ್ದಾರೆ. ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಪಠ್ಯ ಪರಿಷ್ಕರಣೆ ಸಮಿತಿಯ ಅಧ್ಯಕ್ಷರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ವರದಿ ನೀಡಲು ಶಿಕ್ಷಣ ಸಚಿವರಿಗೆ ತಿಳಿಸಲಾಗಿದೆ. ಪ್ರಕರಣದ ಎಲ್ಲ ಆಯಾಮಗಳ ಪರಿಶೀಲನೆಯ ನಂತರ ವರದಿ ನೀಡುವುದಾಗಿ ಸಚಿವರು ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಆದಿಚುಂಚನಗಿರಿ ಸ್ವಾಮೀಜಿಗಳನ್ನು ಸಚಿವರು ಭೇಟಿ ಮಾಡಿರುವುದಾಗಿ ತಿಳಿಸಿ, ಸತ್ಯಾಂಶವನ್ನು ದಾಖಲೆ ಸಮೇತ ನೀಡುವುದಾಗಿ ಸಚಿವರು ತಿಳಿಸಿದ್ದು, ವರದಿ ಬಂದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಉತ್ತರಪ್ರದೇಶದ ಜ್ಞಾನವಾಪಿ ಮಸೀದಿಯಂತೆ ಮಳಲಿ ಮಸೀದಿಯ  ಸರ್ವೇ ಕಾರ್ಯ ಆಗಬೇಕು ಎಂಬ ಕೂಗು ಕೇಳಿ ಬರುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಪ್ರಕರಣವು ನ್ಯಾಯಾಲಯದಲ್ಲಿದ್ದು, ಜೂನ್ 3ಕ್ಕೆ ವಿಚಾರಣೆ ಇದೆ. ಈ ಬಗ್ಗೆ ಪ್ರತಿಕ್ರಿಯೆ ನೀಡುವುದು ಉಚಿತವಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments