ಮತ್ತೆ ಮುನ್ನೆಲೆಗೆ ಬಂದ ಪಠ್ಯ ಪರಿಷ್ಕರಣೆ

Webdunia
ಮಂಗಳವಾರ, 30 ಮೇ 2023 (20:54 IST)
ಮತ್ತೊಮ್ಮೆ ಪಠ್ಯ ಪರಿಷ್ಕರಣೆ ವಿಷಯವು ಮುನ್ನೆಲೆಗೆ ಬಂದಿದ್ದು ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರುತ್ತಿದ್ದಂತೆ ಪಠ್ಯ ಪರಿಷ್ಕರಣೆಗೆ ಮುಂದಾಗಿದೆ. ಇನ್ನು ನಾಳೆ ರಾಜ್ಯಾದ್ಯಂತ ಶಾಲೆಗಳು ಪ್ರಾರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಪಠ್ಯಪುರಿಷ್ಕರಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವರು ತಿಳಿಸಿದರು . ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರ್ಕಾರ ರೋಹಿತ್ ಚಕ್ರತಿರ್ಥ್ ನೇತೃತ್ವದಲ್ಲಿ ಪಠ್ಯ ಪರಿಷ್ಕರಣೆ ಮಾಡಿತ್ತು. ಆದರೆ ಈ ಪಠ್ಯ ಪರಿಷ್ಕರಣೆಗೆ ಕಾಂಗ್ರೆಸ್ ಸರ್ಕಾರ ವಿರೋಧ  ವ್ಯಕ್ತಪಡಿಸಿತ್ತು , ಆದರೆ ಇವಾಗ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ  ಮತ್ತೆ ಪಠ್ಯ ಪರಿಷ್ಕರಣೆ ಆಗುತ್ತಾ ಎಂಬ ಪ್ರಶ್ನೆ ಉದ್ಬವಾಗಿದೆ.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಉಲ್ಲೇಖವಾದ ಇರುವಂತೆ ಪಠ್ಯ ಪರಿಷ್ಕರಣೆ ಮಾಡುತ್ತೇವೆ ಎಂಬುದಕ್ಕೆ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ರವರು ಪ್ರತಿಕ್ರಿಯೆ ನೀಡಿದರು. ಸಿಎಂ ನೇತೃತ್ವದಲ್ಲಿ ಸಭೆ ನಡೆಸಿ ಒಂದು ಕಮಿಟಿ ರಚಿಸುತ್ತೇವೆ ಅಗತ್ಯವಿದ್ದರೆ ಪಠ್ಯ ಪರಿಷ್ಕರಣೆ ಮಾಡುತ್ತೇವೆ ಎಂದು ಹೇಳಿದರು.ಇನ್ನು ಈಗಾಗ್ಲೇ ಖಾಸಗಿ ಶಾಲೆ ಒಕ್ಕೂಟವು ಸಹ ಸರ್ಕಾರಕ್ಕೆ ಹಳೆಯ ಪಠ್ಯ ಮುಂದುವರೆಸುವಂತೆ ಮನವಿ ಮಾಡಿಕೊಂಡಿದ್ದರು. ಹಾಗೂ ಸಾಹಿತಿಗಳು ಸಹ ಕಳೆದ  ವರ್ಷ ಪಠ್ಯ ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿದ್ದರು. ಇಗಾ ಖಾಸಗಿ ಶಾಲೆ ಹಾಗೂ ಸಾಹಿತಿಗಳು ಮನವಿ ಬೆನ್ನಲ್ಲೇ ಪಠ್ಯ ಪರಿಷ್ಕರಣೆಗೆ ಸಿದ್ರಾಮಯ್ಯ ಸರ್ಕಾರ ಮುಂದಾಗಿದೆ.

ಇನ್ನು ಕಳೆದ ಭಾರೀ ಆರ್ ಎಸ್ ಎಸ್ ಸಂಸ್ಥಾಪಕ ಹೆಡ್ಗೆವಾರ್ ಚಕ್ರವರ್ತಿ ಸೂಲಿಬೆಲೆ ಪಠ್ಯ ಸೇರಿಸಲಾಗಿತ್ತು. ಹಾಗೂ ವೀರ್ ಸಾವರ್ಕರ್‌ ಅವರ ಜೀವನ ಚರಿತ್ರೆಯನ್ನು ಸಹ ಪಠ್ಯಯಲ್ಲಿ ಸೇರಿಸಲಾಗಿತ್ತು, ವೀರ್ ಸಾವರ್ಕರ್‌ ಪಠ್ಯ ಪುಸ್ತಕದಲ್ಲಿ ಸೇರಿಸಿದರಿಂದ  ಹಲವು ಧರ್ಮ ಧಂಗಲ್‌ಗೆ ಕಾರಣವಾಗಿತ್ತು. ಹೀಗಾಗಿ ಮಕ್ಕಳ ಭವಿಷ್ಯಕ್ಕೆ ಅವಶ್ಯಕ ಇರುವ ಪಠ್ಯ ಪರಿಷ್ಕರಣೆ ಮಾಡಲು ಸರ್ಕಾರ ಸಜ್ಜಾಗಿದೆ. ಇನ್ನು ನಾಳೆಯಿಂದ ರಾಜ್ಯಾದ್ಯಂತ ಅಧಿಕೃತವಾಗಿ ಶಾಲೆಗಳು ಪ್ರಾರಂಭವಾಗಲಿದ್ದು ಈಗಾಗಲೇ ಬಹುತೇಕ ಪಠ್ಯಪುಸ್ತಕಗಳು ಪ್ರಿಂಟಾಗಿ ಶಾಲೆಯನ್ನು ತಲುಪಿದೆ ಹೀಗಾಗಿ ಮಕ್ಕಳಿಗೆ ತೊಂದರೆಯಾಗದಂತೆ ನಾವು ಈ ಬಾರಿ ಪಠ್ಯಪುಸ್ತಕವನ್ನು ಪರಿಷ್ಕರಣೆ ಮಾಡಿ ವಿತರಿಸುತ್ತೇವೆ ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು.ಒಟ್ಟಾರೆಯಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಪಠ್ಯ ಪರಿಷ್ಕರಣೆ ಮಾಡಲು ಹೊರಟಿದೆ. ಸರ್ಕಾರವು ಮಕ್ಕಳಿಗೆ ಯಾವುದೇ ರೀತಿ ತೊಂದರೆ ಆಗದಂತೆ ಪಠ್ಯಪುರಿಷ್ಕರಣೆ ಮಾಡಿ ಈ ಗೊಂದಲಕ್ಕೆ ಇಂತಿ ಶ್ರೀ ಹಾಡಬೇಕಾಗಿದೆ ಹಾಗೂ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಕಡೆ ಗಮನಹರಿಸಬೇಕಾಗಿದೆ. 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments