Webdunia - Bharat's app for daily news and videos

Install App

ಅಭಿವೃದ್ಧಿಗೆ ಆಗ್ರಹಿಸಿ ಪ್ರತಿಭಟಿಸಿದ ತಾಂಡಾ ನಿವಾಸಿಗಳು!

Webdunia
ಬುಧವಾರ, 19 ಡಿಸೆಂಬರ್ 2018 (16:25 IST)
ಯುವ ಬಂಜಾರ ಸಂಘದ ವತಿಯಿಂದ ತಾಂಡಾಗಳ ಅಭಿವೃದ್ಧಿಗೆ ಆಗ್ರಹಿಸಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. 

ಪಾವಗಡ ತಾಲ್ಲೂಕಿನ ಲಂಬಾಣಿ ತಾಂಡಾಗಳ ಮತ್ತು ಸಮಾಜದ ಅಭಿವೃದ್ಧಿಗೆ ತಾಲ್ಲೂಕು ಆಡಳಿತ ನಿರ್ಲಕ್ಷ್ಯ ಧೋರಣೆ ತಾಳುತ್ತಿದೆ ಎಂದು ಅರೋಪಿಸಿ ಪಟ್ಟಣದ ತಹಶೀಲ್ದಾರ್ ಕಛೇರಿ ಆವರಣದಲ್ಲಿ ಯುವ ಬಂಜಾರ ಸಂಘದ ಸದಸ್ಯರು ಅನಿರ್ಧಿಷ್ಟಾವಧಿ ಸತ್ಯಾಗ್ರಹ ಹಮ್ಮಿಕೊಂಡಿದ್ದರು.

ಪ್ರಮುಖರಾದ ಗೋವಿಂದ ನಾಯ್ಕ ಮಾತನಾಡಿ, ಪಾವಗಡ ತಾಲ್ಲೂಕಿನಲ್ಲಿ 29 ತಾಂಡಾಗಳಿವೆ. 20 ಸಾವಿರಕ್ಕೂ ಹೆಚ್ಚು ಜನಸಂಖ್ಯೆಯಿದ್ದು, ನಮ್ಮ ಆರಾಧ್ಯ ದೈವ ಸೇವಾ ಲಾಲ್ ಜಯಂತಿಯನ್ನು ಅಚರಿಸಲು ಪಟ್ಟಣದಲ್ಲಿ 1 ಎಕರೆ ಜಮೀನು ನೀಡಿ ಸಮುದಾಯ ಭವನವನ್ನು ನಿರ್ಮಿಸಿಕೊಡಬೇಕು.

ಪಟ್ಟಣದ ಸರ್ಕಲ್ಗೆ ಸೇವಾಲಾಲ್ ಸರ್ಕಲ್ ಎಂದು ನಾಮಕರಣ ಮಾಡಬೇಕು. 29 ತಾಂಡಾಗಳ ಪೈಕಿ ಕೆಲವೇ ತಾಂಡಾಗಳು ಮಾತ್ರ ಕಂದಾಯ ಗ್ರಾಮಗಳಾಗಿದ್ದು, ಉಳಿದವುಗಳನ್ನು ಕಂದಾಯ ಗ್ರಾಮಗಳನ್ನಾಗಿಸಬೇಕು. ತಾಂಡಾಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಬೇಕು ಎಂಬಿತ್ಯಾದಿ ಬೇಡಿಕೆ ಈಡೇರಿಕೆ ಮಾಡುವಂತೆ ಆಗ್ರಹ ಮಾಡಿದ್ದಾರೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments