ಅಭಿವೃದ್ಧಿಗೆ ಆಗ್ರಹಿಸಿ ಪ್ರತಿಭಟಿಸಿದ ತಾಂಡಾ ನಿವಾಸಿಗಳು!

Webdunia
ಬುಧವಾರ, 19 ಡಿಸೆಂಬರ್ 2018 (16:25 IST)
ಯುವ ಬಂಜಾರ ಸಂಘದ ವತಿಯಿಂದ ತಾಂಡಾಗಳ ಅಭಿವೃದ್ಧಿಗೆ ಆಗ್ರಹಿಸಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. 

ಪಾವಗಡ ತಾಲ್ಲೂಕಿನ ಲಂಬಾಣಿ ತಾಂಡಾಗಳ ಮತ್ತು ಸಮಾಜದ ಅಭಿವೃದ್ಧಿಗೆ ತಾಲ್ಲೂಕು ಆಡಳಿತ ನಿರ್ಲಕ್ಷ್ಯ ಧೋರಣೆ ತಾಳುತ್ತಿದೆ ಎಂದು ಅರೋಪಿಸಿ ಪಟ್ಟಣದ ತಹಶೀಲ್ದಾರ್ ಕಛೇರಿ ಆವರಣದಲ್ಲಿ ಯುವ ಬಂಜಾರ ಸಂಘದ ಸದಸ್ಯರು ಅನಿರ್ಧಿಷ್ಟಾವಧಿ ಸತ್ಯಾಗ್ರಹ ಹಮ್ಮಿಕೊಂಡಿದ್ದರು.

ಪ್ರಮುಖರಾದ ಗೋವಿಂದ ನಾಯ್ಕ ಮಾತನಾಡಿ, ಪಾವಗಡ ತಾಲ್ಲೂಕಿನಲ್ಲಿ 29 ತಾಂಡಾಗಳಿವೆ. 20 ಸಾವಿರಕ್ಕೂ ಹೆಚ್ಚು ಜನಸಂಖ್ಯೆಯಿದ್ದು, ನಮ್ಮ ಆರಾಧ್ಯ ದೈವ ಸೇವಾ ಲಾಲ್ ಜಯಂತಿಯನ್ನು ಅಚರಿಸಲು ಪಟ್ಟಣದಲ್ಲಿ 1 ಎಕರೆ ಜಮೀನು ನೀಡಿ ಸಮುದಾಯ ಭವನವನ್ನು ನಿರ್ಮಿಸಿಕೊಡಬೇಕು.

ಪಟ್ಟಣದ ಸರ್ಕಲ್ಗೆ ಸೇವಾಲಾಲ್ ಸರ್ಕಲ್ ಎಂದು ನಾಮಕರಣ ಮಾಡಬೇಕು. 29 ತಾಂಡಾಗಳ ಪೈಕಿ ಕೆಲವೇ ತಾಂಡಾಗಳು ಮಾತ್ರ ಕಂದಾಯ ಗ್ರಾಮಗಳಾಗಿದ್ದು, ಉಳಿದವುಗಳನ್ನು ಕಂದಾಯ ಗ್ರಾಮಗಳನ್ನಾಗಿಸಬೇಕು. ತಾಂಡಾಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಬೇಕು ಎಂಬಿತ್ಯಾದಿ ಬೇಡಿಕೆ ಈಡೇರಿಕೆ ಮಾಡುವಂತೆ ಆಗ್ರಹ ಮಾಡಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಕೋಝಿಕ್ಕೋಡ್‌ನ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಜನ ಕಿಕ್ಕಿರಿದ್ದ ವೇಳೆಯೇ ನಡೆಯಿತು ಬೆಂಕಿ ಅವಘಡ

ಮುಂದಿನ ಸುದ್ದಿ
Show comments