ಸಿಡಿಲು ಬಡಿದು ಕುರಿ ಕಾಯುತ್ತಿದ್ದ ಸಹೋದರರು ಬಲಿ: 9 ಕುರಿಗಳು ಸಾವು

Webdunia
ಮಂಗಳವಾರ, 19 ಏಪ್ರಿಲ್ 2022 (16:58 IST)
ಜಿಲ್ಲೆಯಲ್ಲಿ ಬೇಸಿಗೆಯೋ ಮಳೆಗಾಲವೋ ಅನ್ನೋದೆ ತಿಳಿಯುತ್ತಿಲ್ಲ.‌ ಆ ಮಟ್ಟಿಗೆ ವರುಣನ ಆರ್ಭಟ ಶುರುವಾಗಿದೆ. ವಿಪರ್ಯಾಸ ಅಂದ್ರೆ ಒಂದೆಡೆ ಅಕಾಲಿಕ ಮಳೆಗೆ ರೈತರ ಬೆಳೆ ನಾಶವಾದರೆ ಇತ್ತ ಸಿಡಿಲಿನ ಹೊಡೆತಕ್ಕೆ ಜೀವಗಳೇ ಬಲಿಯಾಗಿವೆ.
ವಿಜಯಪುರ ಜಿಲ್ಲೆಯ ಕೊಲ್ಹಾರ ಸೇರಿ ತಾಲೂಕಿನಲ್ಲಿ ಸೋಮವಾರ ಸಂಜೆ  ಬಿರುಗಾಳಿ ಸಹಿತ ಮಳೆ ಆರಂಭವಾಗಿದ್ದು, ಜೊತೆಗೆ ಸಿಡಿಲಿನ ಅಬ್ಬರಕ್ಕೆ ಕೊಲ್ಹಾರ ತಾಲೂಕಿನ ಚಿರಲದಿನ್ನಿ ಗ್ರಾಮದಲ್ಲಿ ಜಮೀನೊಂದರಲ್ಲಿ ಕುರಿ ನಿಲ್ಲಿಸಿಕೊಂಡಿದ್ದ ಕುರಿಗಾಯಿ ಸಹೋದರರಿಬ್ಬರು ಸಿಡಿಲಿನ ಹೊಡೆತಕ್ಕೆ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಬೀರಪ್ಪ ಶಿವಪ್ಪ ಬಡೆಗೋಳ (20), ಮಹೇಶ ಸತ್ಯಪ್ಪ ಬಡೆಗೋಳ‌(14) ಸಾವನ್ನಪ್ಪಿದ್ದಾರೆ..
ಇಬ್ಬರು ಸಹ ಸಹೋದರ ಸಂಬಂಧಿಗಳು ಎಂದು ಹೇಳಲಾಗಿದೆ. ಸಂಬಂಧದಲ್ಲಿ ಇಬ್ಬರು ಅಣ್ಣತಮ್ಮಂದಿರು ಎನ್ನಲಾಗಿದೆ. ಸಹೋದರರ ಜೊತೆಗೆ ಇದ್ದ 9 ಕುರಿಗಳು ಸಹ ಸಿಡಿಲ ಬಡಿತಕ್ಕೆ ಸಾವನ್ನಪ್ಪಿವೆ.
ಕುರಿ ಕಾಯುವುದನ್ನೆ ಕಾಯಕ ಮಾಡಿಕೊಂಡಿದ್ದ ಬಡೆಗೋಳ ಕುಟುಂಬಸ್ಥರು ಮೂಲತಃ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮದವರು. ಬದುಕು ಕಟ್ಟಿಕೊಳ್ಳಲು ಕುರಿಗಳ ಸಮೇತ ವಿಜಯಪುರ ಜಿಲ್ಲೆಗೆ ಬಂದಿದ್ದರು..
ಇಂದು ಸೋಮವಾರ ಕುರಿಗಳ ಸಮೇತ ಚಿರಲದಿನ್ನಿ ಗ್ರಾಮದ‌ ಜಮೀನೊಂದಕ್ಕೆ ಬಂದಿದ್ದಾರೆ. ಈ ವೇಳೆ ಮಳೆ ಬರುತ್ತಿರೋದನ್ನ ಕಂಡ ಸಹೋದರರು ಕುರಿಗಳ‌ ಸಮೇತ ಆಶ್ರಯ ಹುಡುಕಿ ಹೊರಟಾಗಲೇ ಸಿಡಿಲು ಬಡಿದಿದೆ. ಸ್ಥಳದಲ್ಲಿ ಇಬ್ಬರು ಸಹೋದರರು ಅಸುನೀಗಿದ್ದು, 9 ಕುರಿಗಳು ಸಾವನ್ನಪ್ಪಿವೆ. ಸ್ಥಳಕ್ಕೆ ಕೊಲ್ಹಾರ ತಹಶೀಲ್ದಾರ ಭೇಟಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಿತ್ ಶಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಮಮತಾ ಬ್ಯಾನರ್ಜಿ

ಮಧ್ಯಪ್ರಾಚ್ಯ ಸಂಘರ್ಷ: ಯಾವುದೇ ಇಂಧನ ಕೊರತೆಯಿಲ್ಲ

ಸುಧಾಕರ್ ಆರೋಗ್ಯದ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ

ಮದುವೆ ನೆಪದಲ್ಲಿ ಯುವತಿಗೆ ದೋಖಾ: ಮಗು, ಸಂತ್ರಸ್ತೆ ಪಾಲನೆಗೆ ಕೃಷ್ಣ ಜೆ ರಾವ್‌ ಎಷ್ಟು ಹಣ ನೀಡಬೇಕು ಗೊತ್ತಾ

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ, ಆತ್ಮಹತ್ಯೆ ಶಂಕೆ

ಮುಂದಿನ ಸುದ್ದಿ
Show comments