ದೇವರಿಗೆ ನಮಸ್ಕಾರ ಮಾಡಿ ಗುಡಿಯಲ್ಲಿರೋ ಹಣ ಕದ್ದ ಚಾಲಾಕಿ ಕಳ್ಳ

Webdunia
ಬುಧವಾರ, 8 ಜನವರಿ 2020 (15:10 IST)
ಖದೀಮ ಕಳ್ಳನೊಬ್ಬ ಪ್ರಸಿದ್ಧ ದೇವಸ್ಥಾನಕ್ಕೆ ನುಗ್ಗಿ ದೇವರಿಗೆ ನಮಿಸಿ ಹಣ ದೋಚಲು ಮುಂದಾಗಿದ್ದ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ಕಾಲಜ್ಞಾನಿ ಬಸವೇಶ್ವರ ದೇವಸ್ಥಾನ ಮೇಲೆ ಕಣ್ಣು ಹಾಕಿ ಹಣ ದೋಚಲು ಹೋದ ಹುಡುಗನೊಬ್ಬ ಈಗ ಜೈಲು ಪಾಲಾಗಿದ್ದಾನೆ. ದೇವರಿಗೆ ನಮಸ್ಕಾರ ಮಾಡಿ ಅದೇ ದೇಗುಲದಲ್ಲಿ ರಾತ್ರಿ ದರೋಡೆಗೆ ಯತ್ನಿಸಿದ್ದ ಕಳ್ಳ ಮಾಳಿಂಗರಾಯ ಜೈಲು ಸೇರಿದ್ದಾನೆ.

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದ ಕೊಡೇಕಲ್ ‌ಬಸವೇಶ್ವರ ದೇಗುಲದಲ್ಲಿ ಘಟನೆ ನಡೆದಿದೆ. ಈ ದೇಗುಲ ಕಲ್ಯಾಣ ‌ಕರ್ನಾಟಕ ಭಾಗದಲ್ಲಿಯೇ ಖ್ಯಾತಿ ಪಡೆದ ದೇಗುಲವಾಗಿದೆ. ಇಂತಹ ಧಾರ್ಮಿಕ ಕ್ಷೇತ್ರದಲ್ಲಿಯೇ ಕಳ್ಳತನಕ್ಕೆ ಕಣ್ಣು ಹಾಕಿದ್ದ ಮಾಳಿಂಗರಾಯ, ಹಣ ಕಳ್ಳತನ ಮಾಡಲು ಯತ್ನಿಸಿ ವಿಫಲನಾಗಿದ್ದಾನೆ.

ಮಾಳಿಂಗರಾಯ ರಾಜನಕೊಳ್ಳುರು ಗ್ರಾಮದ ನಿವಾಸಿಯಾಗಿದ್ದು, ಕಳೆದ ಸಲ ರಾತ್ರಿ ದೇಗುಲದ ಬೀಗ ಮುರಿದು ಹುಂಡಿ ದೋಚಲು ಯತ್ನಿಸಿದ್ದಾನೆ. ಕಳ್ಳತನ ಯತ್ನದ ವಿಡಿಯೋ ದೇಗುಲದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ‌. ಹುಂಡಿ ಒಡೆಯಲು ಸಾಧ್ಯವಾಗದಕ್ಕೆ ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್ ತೆರಳಿದ್ದಾನೆ. ಸಿಸಿ ಕ್ಯಾಮೆರಾದ ವಿಡಿಯೋ ಆಧರಿಸಿ ಖದೀಮ ಕಳ್ಳ ಮಾಳಿಂಗರಾಯನನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments